ಆ್ಯಪ್ನಗರ

ಅಂಗಡಿಗಳ ಮೇಲೆ ದಾಳಿ: 2350 ರೂ. ದಂಡ

ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರ, ಕುಮಾರಪಟ್ಟಣಂ (ಕೊಡಿಯಾಲ) ಮತ್ತು ಮಾಕನೂರ ಕ್ರಾಸ್‌ನ ಆಯ್ದ ಅಂಗಡಿಗಳ ಮೇಲೆ ಶುಕ್ರವಾರ ದಾಳಿ ನಡೆಸಿ 2350 ರೂ. ದಂಡ ವಸೂಲಿ ಮಾಡಿದ್ದಾರೆ.

Vijaya Karnataka 1 Oct 2019, 5:00 am
ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ರಾಣೇಬೆನ್ನೂರು ನಗರ, ಕುಮಾರಪಟ್ಟಣಂ (ಕೊಡಿಯಾಲ) ಮತ್ತು ಮಾಕನೂರ ಕ್ರಾಸ್‌ನ ಆಯ್ದ ಅಂಗಡಿಗಳ ಮೇಲೆ ಶುಕ್ರವಾರ ದಾಳಿ ನಡೆಸಿ 2350 ರೂ. ದಂಡ ವಸೂಲಿ ಮಾಡಿದ್ದಾರೆ.
Vijaya Karnataka Web shoplifting rs fine
ಅಂಗಡಿಗಳ ಮೇಲೆ ದಾಳಿ: 2350 ರೂ. ದಂಡ


ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿಧೂಮಪಾನ ಮಾಡುವ ಮತ್ತು ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್‌ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸ್‌ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಅಡಿಯಲ್ಲಿಕಲಂ-4ರಡಿಯಲ್ಲಿ16 ಪ್ರಕಣದಲ್ಲಿ ದಂಡ ವಸೂಲಿ ಮಾಡಿದ್ದಾರೆ. ದಾಳಿಯಲ್ಲಿಜಿಲ್ಲಾತಂಬಾಕು ನಿಯಂತ್ರಣ ಸಲಹೆಗಾರ ಡಾ.ಸಂತೋಷ ದಡ್ಡಿ, ದಾದಾಪೀರ ಹುಲಿಕಟ್ಟಿ, ರಾಣೇಬೆನ್ನೂರು ತಾಲೂಕು ಹಿರಿಯ ಆರೋಗ್ಯ ಸಹಾಯಕ ನಾಗರಾಜ ಕುಡುಪಲಿ, ಆಹಾರ ಸುರಕ್ಷತಾ ಅದಿಕಾರಿ ಎಸ್‌.ಸಿ. ಕೋರಿ, ಮಹೇಶ ಕಮ್ಮೂರ ಹಾಗೂ ಪೊಲೀಸ್‌ ಸಿಬ್ಬಂದಿ ಇತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ