ಆ್ಯಪ್ನಗರ

ಆರು ತಾಲೂಕೂ ಪ್ರವಾಹ ಪೀಡಿತ :ಘೋಷಣೆ

ಹಾವೇರಿ: ಜಿಲ್ಲೆಯ ಆರು ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ಸರಕಾರ ಘೋಷಣೆ ಮಾಡಿದೆ. ಎಸ್‌.ಡಿ.ಆರ್‌.ಎಫ್‌./ ಎನ್‌.ಡಿ.ಆರ್‌.ಎಫ್‌. ಮಾರ್ಗಸೂಚಿಯ ಪ್ರಕಾರ ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಕೋಶದ ಉಪ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

Vijaya Karnataka 11 Aug 2019, 5:00 am
ಹಾವೇರಿ: ಜಿಲ್ಲೆಯ ಆರು ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ಸರಕಾರ ಘೋಷಣೆ ಮಾಡಿದೆ. ಎಸ್‌.ಡಿ.ಆರ್‌.ಎಫ್‌./ ಎನ್‌.ಡಿ.ಆರ್‌.ಎಫ್‌. ಮಾರ್ಗಸೂಚಿಯ ಪ್ರಕಾರ ಪರಿಹಾರ ಕಾರ್ಯವನ್ನು ಕೈಗೊಳ್ಳುವಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಕೋಶದ ಉಪ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.
Vijaya Karnataka Web six taluk flooding declaration
ಆರು ತಾಲೂಕೂ ಪ್ರವಾಹ ಪೀಡಿತ :ಘೋಷಣೆ


ಆಗಸ್ಟ್‌ 1 ರಿಂದ 9ರವರೆಗೆ ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಮಹಾ ಮಳೆಯಾಗಿದ್ದು, ಕೃಷ್ಣಾ ನದಿ ಸೇರಿದಂತೆ ವಿವಿಧ ನದಿಗಳು ಭರ್ತಿಯಾಗಿ ಪ್ರವಾಹ ಮತ್ತು ಅತಿವೃಷ್ಟಿಯಿಂದ ಬೆಳೆ, ಜೀವಹಾನಿ ಹಾಗೂ ಮೂಲ ಸೌಕರ್ಯಗಳಿಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ 17 ಜಿಲ್ಲೆಗಳ 80 ತಾಲೂಕುಗಳನ್ನು ತಕ್ಷ ಣದಿಂದ ಜಾರಿಗೆ ಬರುವಂತೆ ಪ್ರವಾಹ ಪೀಡಿತ ಪ್ರದೇಶವೆಂದು ಘೋಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾವೇರಿ, ಹಾನಗಲ್‌, ಸವಣೂರ, ಶಿಗ್ಗಾಂವ, ಬ್ಯಾಡಗಿ ಹಾಗೂ ಹಿರೇಕೆರೂರು ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿದೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ