ಹಾವೇರಿ: ತಂದೆ ನಿಧನದಿಂದ ಬೇಸತ್ತ ಯೋಧ ಹೃದಯಾಘಾತದಿಂದ ಸಾವು
ಕಳೆದ 18 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಸದ್ಯ ಮೇಘಾಲಯದ 19 ಬಟಾಲಿಯನ್ನಲ್ಲಿದ್ದರು. 15 ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು. ತಂದೆ ನಿಧನದಿಂದ ಬೇಸರದಲ್ಲಿಯೇ ಇದ್ದ ಇವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು.
Vijaya Karnataka Web 27 Nov 2020, 2:29 pm
ಹಿರೇಕೆರೂರ (ಹಾವೇರಿ): ತಂದೆ ನಿಧನರಾದ ಹಿನ್ನೆಲೆಯಲ್ಲಿ ರಜೆ ಮೇಲೆ ತಾಲೂಕಿನ ತಾವರಗಿ ಗ್ರಾಮಕ್ಕೆ ಬಂದಿದ್ದ ಬಿಎಸ್ಎಫ್ ಯೋಧ ಬರಮಗೌಡ ಶಂಕರಲಿಂಗಪ್ಪ ಹೊಸಮನಿ (39) ಎಂಬುವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕಳೆದ 18 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಸದ್ಯ ಮೇಘಾಲಯದ 19 ಬಟಾಲಿಯನ್ನಲ್ಲಿದ್ದರು. 15 ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು. ತಂದೆ ನಿಧನದಿಂದ ಬೇಸರದಲ್ಲಿಯೇ ಇದ್ದ ಇವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಹಿರೇಕೆರೂರ ಆಸ್ಪತ್ರೆಗೆ ಕರೆದುಕೊಂಡು ಹೊರಟ ಸಂದರ್ಭ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದರು.
ಅಂತ್ಯಕ್ರಿಯೆ
ಸಕಲ ಸರಕಾರಿ ಗೌರವಗಳೊಂದಿಗೆ ತಾವರಗಿ ಗ್ರಾಮದ ಅವರ ಸ್ವಂತ ಜಮೀನಿನಲ್ಲಿಗುರುವಾರ ಅಂತ್ಯಕ್ರಿಯೆ ನಡೆಯಿತು. ಹಿರೇಕೆರೂರ ತಹಸೀಲ್ದಾರ ಆರ್.ಎಚ್.ಭಾಗವಾನ್ ಅಂತಿಮ ನಮನ ಸಲ್ಲಿಸಿದರು. ನಂತರ ಸಿಪಿಐ ಮಂಜುನಾಥ ಪಂಡಿತ, ಪಿಎಸ್ಐ ಎಂ.ಟಿ.ದೀಪು ಅವರು ಮೃತ ದೇಹಕ್ಕೆ ಹೂಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದರು.
ನಂತರ ಗಾಳಿಯಲ್ಲಿಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದರು. ಯೋಧನ ಕುಂಟುಂಬ ಸದಸ್ಯರು, ಬಂಧುಗಳು, ತಾವರಗಿ ಹಾಗೂ ಸುತ್ತಲಿನ ಗ್ರಾಮದ ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಕಳೆದ 18 ವರ್ಷಗಳಿಂದ ಬಿಎಸ್ಎಫ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು ಸದ್ಯ ಮೇಘಾಲಯದ 19 ಬಟಾಲಿಯನ್ನಲ್ಲಿದ್ದರು. 15 ದಿನಗಳ ಹಿಂದೆ ಗ್ರಾಮಕ್ಕೆ ಬಂದಿದ್ದರು. ತಂದೆ ನಿಧನದಿಂದ ಬೇಸರದಲ್ಲಿಯೇ ಇದ್ದ ಇವರಿಗೆ ತೀವ್ರ ಎದೆ ನೋವು ಕಾಣಿಸಿಕೊಂಡಿತ್ತು. ಹಿರೇಕೆರೂರ ಆಸ್ಪತ್ರೆಗೆ ಕರೆದುಕೊಂಡು ಹೊರಟ ಸಂದರ್ಭ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದರು.
ಅಂತ್ಯಕ್ರಿಯೆ
ಸಕಲ ಸರಕಾರಿ ಗೌರವಗಳೊಂದಿಗೆ ತಾವರಗಿ ಗ್ರಾಮದ ಅವರ ಸ್ವಂತ ಜಮೀನಿನಲ್ಲಿಗುರುವಾರ ಅಂತ್ಯಕ್ರಿಯೆ ನಡೆಯಿತು. ಹಿರೇಕೆರೂರ ತಹಸೀಲ್ದಾರ ಆರ್.ಎಚ್.ಭಾಗವಾನ್ ಅಂತಿಮ ನಮನ ಸಲ್ಲಿಸಿದರು. ನಂತರ ಸಿಪಿಐ ಮಂಜುನಾಥ ಪಂಡಿತ, ಪಿಎಸ್ಐ ಎಂ.ಟಿ.ದೀಪು ಅವರು ಮೃತ ದೇಹಕ್ಕೆ ಹೂಗುಚ್ಛ ಇರಿಸಿ ಅಂತಿಮ ನಮನ ಸಲ್ಲಿಸಿದರು.
ನಂತರ ಗಾಳಿಯಲ್ಲಿಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಿದರು. ಯೋಧನ ಕುಂಟುಂಬ ಸದಸ್ಯರು, ಬಂಧುಗಳು, ತಾವರಗಿ ಹಾಗೂ ಸುತ್ತಲಿನ ಗ್ರಾಮದ ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.