ಆ್ಯಪ್ನಗರ

ಮಾದಿಗ ಸಮಾಜ ಸಂಘಟನೆಗೆ ರಾಜ್ಯ ಪ್ರವಾಸ

ಹಾವೇರಿ: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಾದಿಗ ಸಮಾಜ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಸಮಾಜದಲ್ಲಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಚರ್ಚಿಸಲಾಗುತ್ತಿದೆ ಎಂದು ಚಿತ್ರದರ್ಗುದ ಸಂಸದ ನಾರಾಯಣಸ್ವಾಮಿ ಹೇಳಿದರು.

Vijaya Karnataka 15 Feb 2020, 5:00 am
ಹಾವೇರಿ: ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಾದಿಗ ಸಮಾಜ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿದ್ದು, ಸಮಾಜದಲ್ಲಿನ ಶೈಕ್ಷಣಿಕ ಅಭಿವೃದ್ಧಿಗಾಗಿ ಚರ್ಚಿಸಲಾಗುತ್ತಿದೆ ಎಂದು ಚಿತ್ರದರ್ಗುದ ಸಂಸದ ನಾರಾಯಣಸ್ವಾಮಿ ಹೇಳಿದರು.
Vijaya Karnataka Web state tour to madhyaka societies organization
ಮಾದಿಗ ಸಮಾಜ ಸಂಘಟನೆಗೆ ರಾಜ್ಯ ಪ್ರವಾಸ


ನಗರದ ಪ್ರವಾಸಿ ಮಂದಿರದಲ್ಲಿಶುಕ್ರವಾರ ಮಾದಿಗ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿ ಚಿರ್ಚಿಸಿದ ಅವರು, ಸಮಾಜದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಸಮಾಜವು ಶೈಕ್ಷಣಿಕವಾಗಿ ತೀರಾ ಹಿಂದುಳಿದಿದ್ದು, ಸಮಾಜದ ಮಕ್ಕಳಿಗೆ ಉನ್ನತ ಶಿಕ್ಷಣ ಹಾಗೂ ವೃತ್ತಿ ಆಧಾರಿತ ಶಿಕ್ಷಣದ ಅವಶ್ಯಕತೆಯಿದ್ದು, ಈ ಬಗ್ಗೆ ಚರ್ಚಿಸಿ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು, ತಮ್ಮ ಉದ್ದೇಶ ಸಮಾಜದ ಮಕ್ಕಳಿಗೆ ವಿಶ್ವ ದರ್ಜೆಯ ಶಿಕ್ಷಣ ದೊರೆಯಬೇಕೆನ್ನುವುದಾಗಿದೆ ಎಂದು ಅವರು ಹೇಳಿದರು.

ಪಕ್ಷಾತೀತವಾಗಿ ಸಮಾಜವನ್ನು ಒಗ್ಗೂಡಿಸಬೇಕಿದೆ. ಸಮಾಜದ ಅಭಿವೃದ್ಧಿಗೆ ಬ್ಯಾಂಕ್‌, ಸೊಸೈಟಿ ಸ್ಥಾಪಿಸಬೇಕು. ಇದಕ್ಕಾಗಿ ಷೇರು ಸಂಗ್ರಹಿಸಬೇಕು, ಸಮಾಜಕ್ಕಾಗಿ ನಿವೇಶನ ಖರೀದಿಸಬೇಕಾಗಿದೆ. ಪಕ್ಷಾತೀತವಾಗಿ ಸಮಾಜವನ್ನು ಸಂಘಟಿಸುವ ಮೂಲಕ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿರುವ ಮಾದಿಗ ಸಮಾಜವನ್ನು ಸಂಘಟಿಸಲು ಸಮಾಜದ ಬಂಧುಗಳು ಮುಂದಾಗಬೇಕೆಂದು ಮನವಿ ಮಾಡಿಕೊಂಡರು.

ಈ ಸಭೆಯಲ್ಲಿಸಂಸದ ನಾರಾಯಣ ಸ್ವಾಮಿ, ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ ಅವರನ್ನು ಸಮಾಜದ ಮುಖಂಡರಾದ ಪರಮೇಶ್ವರಪ್ಪ ಮೇಗಳಮನಿ ನೇತ್ವದಲ್ಲಿಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿಉಡಚಪ್ಪ ಮಾಳಗಿ, ನಾಗರಾಜ ಮಾಳಗಿ, ಸಂಜಯಗಾಂಧಿ ಸಂಜೀವಣ್ಣನವರ, ಅಶೋಕ ಮರೆಣ್ಣನವರ, ಲಿಂಗರಾಜ ದಂಡೆಮ್ಮನವರ, ರಮೇಶ ಜಾಲಿಹಾಳ, ನಿಂಗಪ್ಪ ಕಡೂರ, ಮಂಜಪ್ಪ ಮರೋಳ, ಹೊನ್ನಪ್ಪ ತಗಡಿನಮನಿ, ನಿಂಗಪ್ಪ ನಿಂಬಕ್ಕನವರ, ಕುತುಬುದ್ದಿನ ದೇವಿಹೊಸೂರು, ರಮೇಶ ಮಾಳಿಗಿ, ದುರ್ಗೇಶ್‌ ಮಾದರ, ಸೇರಿದಂತೆ ಉಪಸ್ಥಿತಿರದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ