ಆ್ಯಪ್ನಗರ

ಹಾಸ್ಟೆಲ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು

ರಾಣೇಬೆನ್ನೂರ: ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಕಟ್ಟಡದ ಎರಡನೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ವಿಶ್ವಬಂಧುನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಶನಿವಾರ ಸಂಭವಿಸಿದೆ.

Vijaya Karnataka 20 Oct 2019, 5:00 am
ರಾಣೇಬೆನ್ನೂರ: ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ ಕಟ್ಟಡದ ಎರಡನೇ ಮಹಡಿ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ವಿಶ್ವಬಂಧುನಗರದ ಬಿಸಿಎಂ ಹಾಸ್ಟೆಲ್‌ನಲ್ಲಿ ಶನಿವಾರ ಸಂಭವಿಸಿದೆ.
Vijaya Karnataka Web student dies after falling from hostel
ಹಾಸ್ಟೆಲ್‌ ಮೇಲಿಂದ ಬಿದ್ದು ವಿದ್ಯಾರ್ಥಿನಿ ಸಾವು


ತಾಲೂಕಿನ ಹನುಮಾಪುರ ಗ್ರಾಮದ ಕಾವ್ಯ ಅಶೋಕ ಬೆನ್ನೂರ (18) ಮೃತಳು. ನಗರದ ಕಾಲೇಜುವೊಂದರಲ್ಲಿ್ಲದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿವ್ಯಾಸಂಗ ಮಾಡುತ್ತಿದ್ದ ಕಾವ್ಯಾ, ಬೆಳಗಿನ ಜಾವ 4.30ರಿಂದ 5ರ ನಡುವಿನ ಅವಧಿಯಲ್ಲಿಶೌಚಾಲಯಕ್ಕೆ ತೆರಳಿದಾಗ ಘಟನೆ ಸಂಭವಿಸಿದೆ.

ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸರಕಾರದ ವತಿಯಿಂದ ಹಾಗೂ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ವೈಯಕ್ತಿಕವಾಗಿ ತಲಾ 10 ಸಾವಿರ ರೂ.ಗಳನ್ನು ಪೋಷಕರಿಗೆ ನೀಡಿದರು. ಘಟನೆ ಕುರಿತು ಶಹರ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಿಸಲಾಗಿದೆ.

ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಬ್ಯಾಡಗಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಮಾರುತಿ ರಾಠೋಡ, ಸದಸ್ಯ ಏಕನಾಥ ಭಾನುವಳ್ಳಿ, ತಾಪಂ ಅಧ್ಯಕ್ಷೆ ಗೀತಾ ಲಮಾಣಿ, ಸದಸ್ಯ ಪುಟ್ಟಪ್ಪ ಭಿಕ್ಷಾವರ್ತಿಮಠ, ನಗರಸಭಾ ಸದಸ್ಯ ನಿಂಗರಾಜ ಕೋಡಿಹಳ್ಳಿ, ಜಿಪಂ ಸಿಇಒ, ಎಸ್‌ಪಿ ಕೆ.ದೇವರಾಜ, ಎಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್‌ಪಿ ಟಿ.ವಿ.ಸುರೇಶ, ಡಿಡಿಪಿಯು ಎಸ್‌.ಸಿ.ಪೀರಜಾದೆ, ಬಿಸಿಎಂ ಇಲಾಖೆಯ ಜಿಲ್ಲಾಮತ್ತು ತಾಲೂಕು ಅಧಿಕಾರಿಗಳು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಪೋಷಕರ ಆಕ್ರಂದನ: ಮಗಳ ಸಾವಿನ ಸುದ್ದಿ ಕೇಳಿ ದಿಗ್ಭ್ರಾಂತರಾಗಿದ್ದ ತಂದೆ, ತಾಯಿ ರೋದನ ಹೇಳತೀರದಾಗಿತ್ತು. 'ತಾನು ವ್ಯಾಸಂಗ ಮುಗಿಸಿದ ನಂತರ ನಿಮ್ಮನ್ನೆಲ್ಲಾಚೆನ್ನಾಗಿ ನೋಡಿಕೊಳ್ಳುತ್ತೇನೆ' ಎಂದು ಮಗಳು ಪದೆ ಪದೇ ಹೇಳುತ್ತಿದ್ದನ್ನು ಪ್ರಸ್ತಾಪಿಸಿ ತಾಯಿ ಅಳುತ್ತಿದ್ದ ದೃಶ್ಯ ಮನಕಲುಕುವಂತಿತ್ತು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ