ಆ್ಯಪ್ನಗರ

ಆತ್ಮವಿಶ್ವಾಸವಿದ್ಧರೆ ಯಶಸ್ಸು ಸಾಧ್ಯ

ರಾಣೇಬೆನ್ನೂರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಗಳಿಸಲು ಪಠ್ಯದ ಜತೆಯಲ್ಲಿ ಕೌಶಲ್ಯಕ್ಕೆ ಪೂರಕವಾದ ಸಂಗತಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡಿರಬೇಕು ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

Vijaya Karnataka 3 Jul 2019, 5:00 am
ರಾಣೇಬೆನ್ನೂರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಉದ್ಯೋಗ ಗಳಿಸಲು ಪಠ್ಯದ ಜತೆಯಲ್ಲಿ ಕೌಶಲ್ಯಕ್ಕೆ ಪೂರಕವಾದ ಸಂಗತಿಗಳನ್ನು ವಿದ್ಯಾರ್ಥಿಗಳು ತಿಳಿದುಕೊಂಡಿರಬೇಕು ಎಂದು ಮಾಜಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
Vijaya Karnataka Web HVR-2RNR4


ನಗರದ ಬಿಎಜೆಎಸ್‌ಎಸ್‌ ಮಹಾವಿದ್ಯಾಲಯದಲ್ಲಿ ಸ್ಥಳೀಯ ಚಾಣಕ್ಯ ಕರಿಯರ್‌ ಅಕಾಡೆಮಿ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಎರಡು ದಿನಗಳ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರಿ ಉದ್ಯೋಗ ಪಡೆಯಲು ತೀವ್ರ ಸ್ಪರ್ಧೆ ಹಾಗೂ ಕಠಿಣ ಸವಾಲುಗಳಿದ್ದು ಮನೋಸ್ಥೈರ್ಯ ಮತ್ತು ಆತ್ಮವಿಶ್ವಾಸದಿಂದ ಮುನ್ನಡೆದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದರು.

ಬಿಎಜೆಎಸ್‌ಎಸ್‌ ಕಾಲೇಜಿನ ಪ್ರಾ. ಎಸ್‌.ಎ.ತಾಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಾಣಕ್ಯ ಕರಿಯರ್‌ ಅಕಾಡೆಮಿಯ ಚಂದ್ರು ಚವ್ಹಾಣ ಕಾರ್ಯಾಗಾರದ ಕುರಿತು ಮಾಹಿತಿ ನೀಡಿದರು. ಹನುಮಂತಪ್ಪ, ಧರು ಖಿಲಾರಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದರು. ಮುತ್ತು ಲಮಾಣಿ, ಸುರೇಶ ಲಮಾಣಿ, ಸೋಮಣ್ಣ ಮೆಡ್ಲೇರಿ ಮತ್ತು ಇತರರು ಇದ್ದರು. ಕಾರ್ಯಾಗಾರದಲ್ಲಿ 150ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ