ಆ್ಯಪ್ನಗರ

ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳಿ

ಹಾನಗಲ್ಲ :ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಿಸುವ ಭೀತಿ ಎದುರಾಗಿದ್ದು, ಸೊಳ್ಳೆ ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿಗಳು ಕ್ರಮ ಜರುಗಿಸಲು ಆದೇಶ ನೀಡಬೇಕೆಂದು ಒತ್ತಾಯಿಸಿ ಸಮಾಜಸೇವಾ ಸಂಘಟನೆ ಲೋಕ್‌ಮಂಚ್‌ ಪ್ರಮುಖರು ಸೋಮವಾರ ತಾಲೂಕಾ ಪಂಚಾಯಿತಿಗೆ ಮನವಿ ಸಲ್ಲಿಸಿದರು.

Vijaya Karnataka 25 Jul 2018, 5:00 am
ಹಾನಗಲ್ಲ :ತಾಲೂಕಿನ ಗ್ರಾಮೀಣ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಿಸುವ ಭೀತಿ ಎದುರಾಗಿದ್ದು, ಸೊಳ್ಳೆ ನಿಯಂತ್ರಣಕ್ಕಾಗಿ ಗ್ರಾಮ ಪಂಚಾಯಿತಿಗಳು ಕ್ರಮ ಜರುಗಿಸಲು ಆದೇಶ ನೀಡಬೇಕೆಂದು ಒತ್ತಾಯಿಸಿ ಸಮಾಜಸೇವಾ ಸಂಘಟನೆ ಲೋಕ್‌ಮಂಚ್‌ ಪ್ರಮುಖರು ಸೋಮವಾರ ತಾಲೂಕಾ ಪಂಚಾಯಿತಿಗೆ ಮನವಿ ಸಲ್ಲಿಸಿದರು.
Vijaya Karnataka Web take action to prevent contagious diseases
ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳಿ


ನಿರಂತರ ಮಳೆಯು ಆವಾಂತರಗಳನ್ನು ಸೃಷ್ಟಿಸುತ್ತಿದೆ. ಕೆಲವು ಗ್ರಾಮಗಳು ಡೆಂಗೆ, ಚಿಕೂನ್‌ಗುನ್ಯಾದಿಂದ ತಲ್ಲಣಿಸಿವೆ. ಚರಂಡಿ ಸ್ವಚ್ಛತೆ, ಫಾಗಿಂಗ್‌, ಕಳೆ ನಾಶಕ ಮತ್ತು ಕುಡಿಯುವ ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಸ್ವಚ್ಛ ಮಾಡುವ ಕಾರ್ಯವನ್ನು ಗ್ರಾಮ ಪಂಚಾಯಿತಿಗಳು ಕಡ್ಡಾಯವಾಗಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಈ ಉದ್ದೇಶದಿಂದ ಎಲ್ಲ ಗ್ರಾಮ ಪಂಚಾಯಿತಿಗಳ ಪಿಡಿಒ ಸಭೆಯನ್ನು ನಡೆಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕಾರ್ಯ ನಿರ್ವಾಹಕ ಅಧಿಕಾರಿ ಪರವಾಗಿ ಅಧಿಕಾರಿ ಮಂಜುಳಾ ಮನವಿ ಸ್ವೀಕರಿಸಿದರು. ಲೋಕ್‌ಮಂಚ್‌ನ ವಿವಿಧ ಗ್ರಾಮಗಳ ಪ್ರಮುಖರಾದ ಫಾಲಾಕ್ಷ ಯ್ಯ ಹಿರೇಮಠ, ರಾಮಚಂದ್ರ ಶಿಡ್ಲಾಪೂರ, ಕಲೀಂ ಮಾಸನಕಟ್ಟಿ, ರಾಜು ವೇರ್ಣೇಕರ ಮನವಿ ಸಲ್ಲಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ