ಆ್ಯಪ್ನಗರ

ಸಂತ್ರಸ್ತರಿಗೆ ತಾತ್ಕಾಲಿಕ ತಗಡಿನ ಶೆಡ್‌

ಹಾವೇರಿ: ಪ್ರವಾಹದಿಂದ ಮನೆಗಳು ಹಾನಿಯಾಗಿ ವಾಸಿಸಲು ಇನ್ನೂ ಸಿದ್ಧವಾಗದ ಕಾರಣ ಪರ್ಯಾಯ ಕ್ರಮವಾಗಿ ಜಿಲ್ಲಾಡಳಿತ ಸಂತ್ರಸ್ತರಿಗೆ ತಾತ್ಕಾಲಿಕ ತಗಡಿನ ಶೆಡ್‌ ನಿರ್ಮಾಣ ಮಾಡಿಕೊಡಲು ಸಿದ್ಧತೆ ನಡೆಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

Vijaya Karnataka 14 Aug 2019, 5:00 am
ಹಾವೇರಿ: ಪ್ರವಾಹದಿಂದ ಮನೆಗಳು ಹಾನಿಯಾಗಿ ವಾಸಿಸಲು ಇನ್ನೂ ಸಿದ್ಧವಾಗದ ಕಾರಣ ಪರ್ಯಾಯ ಕ್ರಮವಾಗಿ ಜಿಲ್ಲಾಡಳಿತ ಸಂತ್ರಸ್ತರಿಗೆ ತಾತ್ಕಾಲಿಕ ತಗಡಿನ ಶೆಡ್‌ ನಿರ್ಮಾಣ ಮಾಡಿಕೊಡಲು ಸಿದ್ಧತೆ ನಡೆಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
Vijaya Karnataka Web temporary jungle shed for victims
ಸಂತ್ರಸ್ತರಿಗೆ ತಾತ್ಕಾಲಿಕ ತಗಡಿನ ಶೆಡ್‌


ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, ಗ್ರಾಮಗಳ ಎತ್ತರ ಪ್ರದೇಶದ ಸರ್ಕಾರಿ ಜಮೀನು ಅಥವಾ ಸರ್ಕಾರಿ ಜಮೀನು ಸಿಗದಿದ್ದರೆ ಖಾಸಗಿ ಜಮೀನನ್ನು ಗುರುತಿಸಿ ಶೆಡ್‌ಗಳ ನಿರ್ಮಾಣ ಮಾಡಿಕೊಡಲು ಸಿದ್ಧತೆ ನಡೆಸಲಾಗಿದೆ ಎಂದರು.

835 ಶೆಡ್‌ ನಿರ್ಮಾಣ:
ಮೊದಲ ಹಂತವಾಗಿ ಹಾವೇರಿ ತಾಲೂಕಿನ 11 ಗ್ರಾಮಗಳಲ್ಲಿ ಶೆಡ್‌ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಕಾರ್ಯ ಜರುಗಿದೆ. 835 ಶೆಡ್‌ಗಳ ನಿರ್ಮಾಣಕ್ಕೆ ಈಗಾಗಲೇ ಸಿದ್ಧತೆ ನಡೆದಿದೆ. ಎರಡು ದಿನದಲ್ಲಿ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ. ಗುಲಗುಂದಿ, ಹಳೆ ಮೇಲ್ಮುರಿ, ಕೋಣನತಂಬಗಿ, ಕೆಸರಹಳ್ಳಿ, ಸಂಗೂರು, ವರದಾಹಳ್ಳಿ, ನಾಗನೂರು, ಕರ್ಜಗಿ, ಹೊಸರಿತ್ತಿ, ಕಂಚಾರಗಟ್ಟಿ ಹಾಗೂ ಹಳೆ ಕಿತ್ತೂರು ಗ್ರಾಮದಲ್ಲಿ ಶೆಡ್‌ಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಭರದಿಂದ ಸಾಗಿದ ದುರಸ್ತಿ ಕಾರ್ಯ: ರಸ್ತೆ, ಸೇತುವೆ, ವಿದ್ಯುತ್‌ ಸಂಪರ್ಕ, ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಹಾನಿಯಾಗಿರುವ ಮೂಲ ಸೌಕರ್ಯಗಳ ಮರು ಸ್ಥಾಪನೆ ಕಾರ್ಯ ಭರದಿಂದ ನಡೆಯುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಎನ್‌.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆಗೆ ತಿಳಿಸಿರುವ ಅವರು, ಜಿಲ್ಲಾದ್ಯಂತ ಒಟ್ಟಾರೆ 5051 ಮೂಲ ಸೌಕರ್ಯಗಳಿಗೆ ಹಾನಿಯಾಗಿದ್ದು 97.89 ಕೋಟಿ ರೂ.ನಷ್ಟು ಅಂದಾಜು ನಷ್ಟವಾಗಿದೆ. 7759 ಮನೆಗಳಿಗೆ ಹಾನಿಯಾಗಿದೆ. 45.90 ಕೋಟಿ ರೂ.ನಷ್ಟು ಹಾನಿಯಾಗಿದೆ. 102.42 ಕೋಟಿ ರೂ. ನಷ್ಟು ತೋಟಗಾರಿಕೆ ಮತ್ತು ಕೃಷಿ ಭೂಮಿ ಹಾನಿಯಾಗಿದೆ. 2.21 ಕೋಟಿ ರೂ. ಕುಡಿಯುವ ನೀರು, 7.71 ಕೋಟಿ ರೂ. ವಿದ್ಯುತ್‌ ಸಂಪರ್ಕ ಹಾನಿಯಾಗಿದೆ ಎಂದು ತಿಳಿಸಿದರು.

ಆರೋಗ್ಯಕ್ಕೆ ಗಮನ: ಶುದ್ಧ ನೀರಿನ ಪೂರೈಕೆ, ಜನ ಜಾನುವಾರುಗಳ ಸಾಂಕ್ರಾಮಿಕ ರೋಗಗಳ ತಡೆಗೆ ಎಲ್ಲ ಪ್ರಹಾವೋತ್ತರ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಮತ್ತು ಪಶು ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

ರಸ್ತೆಗಳ ಪುರ್ನಸ್ಥಾಪನೆ: ಸವಣೂರು ತಾಲೂಕಿನ ಕಳಸೂರು, ನದಿನೀರಲಗಿ, ಮಂತಗಿ, ಕೊರಡೂರ, ಕಾರವಾರ ಸಂಪರ್ಕ ರಸ್ತೆ, ನಾಗನೂರ ಕುಡಿಯುವ ನೀರಿನ ಸಂಪರ್ಕ ಸೇರಿದಂತೆ ಹಲವು ರಸ್ತೆ ಹಾಗೂ ಕುಡಿಯುವ ನೀರಿನ ಘಟಕಗಳ ದುರಸ್ತಿಗಳನ್ನು ಇಂದು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆಹಾರ ಸಾಮಗ್ರಿ ಸ್ವೀಕಾರ: ಜಿಲ್ಲಾಡಳಿತ ಮನವಿಗೆ ಸ್ಪಂದಿಸಿದ ಜನರು ಅಕ್ಕಿ, ಬೆಳೆ, ಜೋಳ, ಬಟ್ಟೆ, ಹೊದಿಕೆ , ಅಡುಗೆ ಸಾಮಗ್ರಿಗಳು ಸೇರಿದಂತೆ ವಿವಿಧ ಪದಾರ್ಥಗಳನು ಸಂತ್ರಸ್ತರಿಗೆ ನೆರವಾಗಿ ನೀಡುತ್ತಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದಾನಿಗಳು ನೀಡಿದ ಸಾಮಗ್ರಿಗಳನ್ನು ಶಾಸಕ ನೆಹರು ಓಲೇಕಾರ ಹಾಗೂ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಸ್ವೀಕರಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ