ಆ್ಯಪ್ನಗರ

ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯ

ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.

Vijaya Karnataka 17 Sep 2019, 5:00 am
ಹಾವೇರಿ: ತಾಲೂಕಿನ ಕನವಳ್ಳಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿಪೋಷಣ ಅಭಿಯಾನ ಕಾರ್ಯಕ್ರಮ ಮತ್ತು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.
Vijaya Karnataka Web the act of infiltrating the siege
ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯ


ಗ್ರಾಮ ಪಂಚಾಯಿತಿ ಸದಸ್ಯೆ ಕವಿತಾ ಕಳಸೂರ ಉದ್ಘಾಟಿಸಿ ಮಾತನಾಡಿ, ಗರ್ಭಿಣಿಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು. ಶುದ್ಧವಾದ ಆಹಾರ ಹಾಗೂ ನೀರು ಕುಡಿಯಬೇಕು ಅಂದಾಗ ಮಕ್ಕಳ ಬೆಳವಣಿಗೆ ಉತ್ತಮವಾಗಿರುತ್ತದೆ ಎಂದು ಹೇಳಿದರು.

ಸರಕಾರದಿಂದ ಗರ್ಭಿಣಿಯರಿಗೆ ಮತ್ತು ಬಾಣಂತಿಯರಿಗೆ ಪೌಷ್ಠಿಕ ಆಹಾರವನ್ನು ನೀಡಲಾಗುತ್ತದೆ. ಅದನ್ನು ಎಲ್ಲರೂ ಸದುಪಯೋಗ ಪಡೆದುಕೊಂಡು ಆರೋಗ್ಯವಂತರಾಗಿ ಬಾಳಬೇಕು ಎಂದರು.

ಆರೋಗ್ಯ ಇಲಾಖೆಯ. ಕೆ.ಎಚ್‌ .ಜವಳಿ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿಗರ್ಭಿಣಿಯರಿಗೆ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಈ ವೇಳೆ ಮುತ್ತೈದೆಯರಿಗೆ ಎಲೆ, ಅಡಿಕೆ, ಬೆಲ್ಲ, ಗೊಬ್ಬರಿ, ಕಣ, ಅಕ್ಕಿಯನ್ನು ಉಂಡಿ ತುಂಬಿ ಆರತಿ ಮಾಡಿ ಸೀಮಂತ ಕಾರ್ಯವನ್ನು ಯಶಸ್ವಿಗೊಳಿಸಿದರು.

ಈ ಸಂದರ್ಭದಲ್ಲಿಅಂಗನವಾಡಿ ಕಾರ್ಯಕರ್ತೆ ಶೈಲಾ ಹುಣಸಿಕಟ್ಟಿ, ಆಶಾಕಾರ್ಯಕರ್ತೆಯರು. ತಾಯಂದಿರು ಮಕ್ಕಳು ಸೇರಿದಂತೆ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ