ಆ್ಯಪ್ನಗರ

ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡನೀಯ

ಹಾವೇರಿ: ರಾಜ್ಯ ಮತ್ತು ದೇಶದ ಜನತೆ ಕೊರೊನಾ ಸಂಕಷ್ಟದಲ್ಲಿತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿಎಪಿಎಂಸಿ ಕಾಯಿದೆಗೆ ತಿದ್ದುಪಡಿ ಜಾರಿಗೊಳಿಸಿ ರೈತರಿಗೆ ಗಾಯದ ಮೇಲೆ ಬರೆ ಎಳೆದಿರುವ ಸರಕಾರದ ಈ ನಿರ್ಣಯ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ದೂರಿದರು.

Vijaya Karnataka 16 May 2020, 5:00 am
ಹಾವೇರಿ: ರಾಜ್ಯ ಮತ್ತು ದೇಶದ ಜನತೆ ಕೊರೊನಾ ಸಂಕಷ್ಟದಲ್ಲಿತುತ್ತು ಅನ್ನಕ್ಕಾಗಿ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿಎಪಿಎಂಸಿ ಕಾಯಿದೆಗೆ ತಿದ್ದುಪಡಿ ಜಾರಿಗೊಳಿಸಿ ರೈತರಿಗೆ ಗಾಯದ ಮೇಲೆ ಬರೆ ಎಳೆದಿರುವ ಸರಕಾರದ ಈ ನಿರ್ಣಯ ಖಂಡನೀಯ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ದೂರಿದರು.
Vijaya Karnataka Web the amendment to the apmc act is reprehensible
ಎಪಿಎಂಸಿ ಕಾಯಿದೆ ತಿದ್ದುಪಡಿ ಖಂಡನೀಯ


ಹಾವೇರಿಯಲ್ಲಿಶುಕ್ರವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು, ರಾಜ್ಯ ಸರಕಾರಕ್ಕೆ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ತರಾತುರಿಯಲ್ಲಿಸುಗ್ರಿವಾಜ್ಞೆ ಮೂಲಕ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರುತ್ತಿರಲಿಲ್ಲ. ಅಧಿವೇಶನದಲ್ಲಿಸಾಧಕ, ಬಾಧಕ ಕುರಿತು ಚರ್ಚೆ ನಡೆಸಿ ರೈತರ ಅಭಿಪ್ರಾಯ ಸಂಗ್ರಹಿಸಿದೇ ಏಕಾಏಕಿ ಕಾಯಿದೆ ಜಾರಿಗೊಳಿಸಿದ್ದು ಸರಿಯಲ್ಲ. ರೈತರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2017ರಲ್ಲಿ ಕಾಂಗ್ರೆಸ್‌ ಈ ಕಾಯಿದೆ ಜಾರಿಗೆ ತರಲು ಉದ್ದೇಶಿಸಿದಾಗ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿಕೈಬಿಡಲಾಗಿತ್ತು. ಈಗ ಲಾಕ್‌ಡೌನ್‌ ಸಂದರ್ಭದಲ್ಲಿಸರಕಾರದ ಈ ಕ್ರಮ ರೈತರಿಗೆ ಮಾರಕವಾಗಿದೆ. ಕಾಯಿದೆ ತಿದ್ದುಪಡಿಯಿಂದ ಮಾರುಕಟ್ಟೆ ವ್ಯವಸ್ಥೆ ಬಹುರಾಷ್ಟ್ರೀಯ ಕಂಪನಿಗಳ ಹಿಡಿತಕ್ಕೆ ಸಿಗಲಿದ್ದು, ಪುನಃ ಪರಾಮರ್ಶಿಸಬೇಕು. ರೈತರಿಗೆ ಮಾರಕವಾಗಿರುವ ಅಂಶಗಳನ್ನು ಕೈಬಿಡಬೇಕೆಂದು ಆಗ್ರಹಿಸಿದರು.

ಅತೀವೃಷ್ಟಿಯಲ್ಲಿಮನೆ ಮತ್ತು ಬೆಳೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಪರಿಹಾರ ನೀಡಲು ಸರಕಾರ ಕೋಟ್ಯಂತರ ಹಣ ಬಿಡುಗಡೆ ಮಾಡಿತ್ತು. ಪರಿಹಾರ ವಿತರಣೆಯಲ್ಲಿಅವ್ಯವಹಾರ ನಡೆದು 7 ಜನ ಗ್ರಾಮ ಲೆಕ್ಕಾಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆಯೇ ವಿನಃ ಯಾರ ಮೇಲೂ ಕಾನೂನು ಕ್ರಮ ಜರುಗಿಲ್ಲ. ಕೂಡಲೇ ತಪ್ಪಿತಸ್ಥರ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹಾಕಬೇಕು. ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ ದ್ದಾರೆ.

ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಘೋಷಿಸಿ:
ರೈತ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ಮಾತನಾಡಿ, ಜಿಲ್ಲೆಯಲ್ಲಿಮುಂಗಾರು ಹಂಗಾಮಿನಲ್ಲಿ1,63,318 ಹೆಕ್ಟೇರ್‌ ಪ್ರದೇಶದಲ್ಲಿ10 ಲಕ್ಷ ಟನ್‌ ಮೆಕ್ಕೆಜೋಳ ಬೆಳೆದಿದ್ದಾರೆ. ಆದರೆ ಸರಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆ 1,760 ರೂ. ಎಷ್ಟು ರೈತರಿಗೆ ಸಿಗುತ್ತದೆ? ಕೆಎಂಎಫ್‌ ಮೂಲಕ ಕೇವಲ 7 ಸಾವಿರ ಮೆಟ್ರಿಕ್‌ ಟನ್‌ ಖರೀದಿಸಿದರೆ ಉಳಿದ ರೈತರು ಮೆಕ್ಕೆಜೋಳ ಯಾರಿಗೆ ಮಾರಬೇಕೆಂದು ಪ್ರಶ್ನಿಸಿದ್ದಾರೆ. ಕೂಡಲೇ ಸರಕಾರ ನೇರವಾಗಿ ಖರೀದಿ ಕೇಂದ್ರ ತೆರೆದು ಖರೀದಿಸಬೇಕೆಂದು ಒತ್ತಾಯಿಸಿ ದರು. ಕೇಂದ್ರ ಸರಕಾರ ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಿಸಬೇಕೆಂದು ಆಗ್ರಹಿಸಿದರು.

ಕೆ.ಎಸ್‌. ನಾಯ್ಕರ, ಕಿರಣಕುಮಾರ ಗಡಿಗೋಳ, ಪ್ರಭುಗೌಡ ಪ್ಯಾಟಿ, ಗಂಗನಗೌಡ ಮುದಿಗೌಡ್ರ, ಜಾನ್‌ ಪುನೀತ ಮುಂತಾದ ರೈತ ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ