ಆ್ಯಪ್ನಗರ

ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಲೇಬೇಕು

ಹಾವೇರಿ: ಪಾಕಿಸ್ತಾನ ಕುಮ್ಮಕ್ಕಿನಿಂದ ಉಗ್ರ ಸಂಘಟನೆಗಳು ಭಾರತೀಯ ಸೈನಿಕರ ಮೇಲೆ ದಾಳಿ ಮಾಡುತ್ತಿವೆ ಇದಕ್ಕೆ ನರೇಂದ್ರ ಮೋದಿ ಅವರು ಪ್ರತಿ ದಾಳಿ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.

Vijaya Karnataka 16 Feb 2019, 5:00 am
ಹಾವೇರಿ: ಪಾಕಿಸ್ತಾನ ಕುಮ್ಮಕ್ಕಿನಿಂದ ಉಗ್ರ ಸಂಘಟನೆಗಳು ಭಾರತೀಯ ಸೈನಿಕರ ಮೇಲೆ ದಾಳಿ ಮಾಡುತ್ತಿವೆ ಇದಕ್ಕೆ ನರೇಂದ್ರ ಮೋದಿ ಅವರು ಪ್ರತಿ ದಾಳಿ ಮಾಡುವ ಮೂಲಕ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಬೇಕಾಗಿದೆ ಎಂದು ಶಾಸಕ ನೆಹರು ಓಲೇಕಾರ ಹೇಳಿದರು.
Vijaya Karnataka Web HVR-15 HAVERI 7
ಹಾವೇರಿ ತಾಪಂ ಕಚೇರಿಯ ಆವರಣದಲ್ಲಿ ಶುಕ್ರವಾರ ಮೃತ ಯೋಧರಿಗೆ ಬಿಜೆಪಿ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.


ನಗರದ ತಹಸೀಲ್ದಾರ ಕಚೇರಿ ಆವರಣದಲ್ಲಿರುವ ಶಾಸಕರ ಕಾರ್ಯಾಲಯದಲ್ಲಿ ಶುಕ್ರವಾರ ಹುತಾತ್ಮ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿ ಅವರು ಮಾತನಾಡಿದರು.

ನಮ್ಮ ನೆಲಕ್ಕೆ ನುಗ್ಗಿ ನಮ್ಮ ಸೈನಿಕರನ್ನು ಹತ್ಯೆ ಮಾಡಿದ್ದು ಪಾಕಿಸ್ತಾನಿ ಪ್ರಚೋದಿತ ಉಗ್ರ ಸಂಘಟನೆ ಎಂಬುದು ಎಲ್ಲರಿಗೂ ತಿಳಿದ ವಿಷಯ. ಪಾಕಿಸ್ತಾನವನ್ನು ಮಟ್ಟಹಾಕಲು ದೇಶವು ಸಿದ್ಧವಾಗಬೇಕು ಎಂದು ಹೇಳಿದರು.

ಬಿಜೆಪಿ ಮುಖಂಡರಾದ ಶಿವಕುಮಾರ ಸಂಗೂರ, ಅಶೋಕ ಬಣಕಾರ, ವಿ.ಆರ್‌. ಪಾಟೀಲ, ಹನುಮಂತಪ್ಪ ಬಡ್ಡಿವಡ್ಡರ, ಬಾಬುಸಾಬ ಮೋಮಿನಗಾರ, ಶಿವರಾಜ ಮತ್ತಿಹಳ್ಳಿ, ಅಡಿವೆಯ್ಯ ಯಲವಿಗಿಮಠ, ನಾಗಪ್ಪ ಬಸೇಗಣ್ಣಿ, ಶಿವಣ್ಣ ಬಸೇಗಣ್ಣಿ, ವೀರುಪಾಕ್ಷಪ್ಪ ಹುಲ್ಲೂರ, ಕೊಟ್ರೇಶಪ್ಪ ಕಂಬಳಿ, ನಜೀರಸಾಬ ನದಾಫ್‌, ಅಬ್ದುಲ್‌ ಮಾಣಿಕ್ಯ, ಹನುಮಂತಪ್ಪ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ