ಆ್ಯಪ್ನಗರ

ಡಿಆರ್‌ಪಿ ಸಮರ್ಥ ನಾಯಕ

ಅಕ್ಕಿಆಲೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಕæೖಕೊಟ್ಟ ಹಿನ್ನೆಲೆಯಲ್ಲಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡರೂ ಹಾನಗಲ್‌ ಜನತೆಗೆ ಬೆನ್ನು ತೋರಿಸಿ ಓಡಿ ಹೋಗಲಿಲ್ಲ. ನಿರಂತರ ಸಂಪರ್ಕದಲ್ಲಿದ್ದು, ಕಷ್ಟ-ಸುಃಖಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಹೇಳಿದರು.

Vijaya Karnataka 6 Apr 2019, 5:00 am
ಅಕ್ಕಿಆಲೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅದೃಷ್ಟ ಕæೖಕೊಟ್ಟ ಹಿನ್ನೆಲೆಯಲ್ಲಿ ಅಲ್ಪ ಮತಗಳ ಅಂತರದಿಂದ ಪರಾಭವಗೊಂಡರೂ ಹಾನಗಲ್‌ ಜನತೆಗೆ ಬೆನ್ನು ತೋರಿಸಿ ಓಡಿ ಹೋಗಲಿಲ್ಲ. ನಿರಂತರ ಸಂಪರ್ಕದಲ್ಲಿದ್ದು, ಕಷ್ಟ-ಸುಃಖಗಳಲ್ಲಿ ಭಾಗಿಯಾಗುತ್ತಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಹೇಳಿದರು.
Vijaya Karnataka Web HVR-5AKR1
ನಿಸ್ಸೀಮ ಆಲದಕಟ್ಟಿಯಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಪರ ವಿಧಾನ ಪರಿಷತ್‌ ಸದಸ್ಯ ಶ್ರೀನಿವಾಸ್‌ ಮಾನೆ ಮತಯಾಚನೆ ನಡೆಸಿದರು.


ಹಾನಗಲ್‌ ತಾಲೂಕಿನ ನಿಸ್ಸೀಮ ಆಲದಕಟ್ಟಿ ಗ್ರಾಮದಲ್ಲಿ ಶುಕ್ರವಾರ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಆರ್‌.ಪಾಟೀಲ ಪರ ಪ್ರಚಾರ ಕೈಗೊಂಡು ಅವರು ಮಾತನಾಡಿದರು.

ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಿ.ಆರ್‌.ಪಾಟೀಲ ಅಪ್ಪಟ ಗಾಂಧಿವಾದಿಯಾಗಿದ್ದು ಎಲ್ಲರನ್ನೂ ಜೊತೆಗೆ ಕರೆದೊಯ್ಯಬಲ್ಲ ಸಮರ್ಥ ನಾಯಕರಾಗಿದ್ದಾರೆ. ಸುಳ್ಳು ಹೇಳುವರಲ್ಲ, ಜನರಿಗೆ ಮೋಸ ಮಾಡುವರಲ್ಲ, ಟೋಪಿ ಹಾಕುವರಲ್ಲ. ಇಂಥ ಸಮರ್ಥ ಅಭ್ಯರ್ಥಿಗೆ ಮತ ನೀಡುವ ಮೂಲಕ ಸೇವೆಗೆ ಅವಕಾಶ ಕಲ್ಪಿಸಿಕೊಡುವಂತೆ ಮನವಿ ಮಾಡಿದರು.

ನಿವೃತ್ತ ಜಿಲ್ಲಾಧಿಕಾರಿ ಬಿ.ಶಿವಪ್ಪ ಮಾತನಾಡಿ, ಕಾಂಗ್ರೆಸ್‌ನಿಂದ ಮಾತ್ರ ಭಾರತಕ್ಕೆ ಭವಿಷ್ಯವಿದೆ. ಬಡವರು, ರೈತರು, ಎಲ್ಲ ವರ್ಗಗಳ ಬಂಧುಗಳನ್ನು ಸಮಾನ ದೃಷ್ಟಿಕೋನದಲ್ಲಿ ಕಾಣುವ ಏಕೈಕ ಪಕ್ಷ ಕಾಂಗ್ರೆಸ್‌ ಎನ್ನುವುದು ಎಲ್ಲರ ಅರಿವಿಗೂ ಬಂದಿದೆ ಎಂದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಂಗನಗೌಡ ಪಾಟೀಲ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಕೆಪಿಸಿಸಿ ಸದಸ್ಯ ಸತೀಶ್‌ ದೇಶಪಾಂಡೆ, ಮುಖಂಡರಾದ ಯಲ್ಲಪ್ಪ ಕಿತ್ತೂರ, ಕಲವೀರಪ್ಪ ಪವಾಡಿ, ಅನಂತವಿಕಾಸ್‌ ನಿಂಗೋಜಿ, ವಿಜಯಕುಮಾರ ದೊಡ್ಡಮನಿ, ಬಸವರಾಜ್‌ ಹಾದಿಮನಿ, ಮಲ್ಲಿಕಾರ್ಜುನ ದೇವಣ್ಣನವರ, ಅರವಿಂದ ಆರೇರ, ಸುರೇಶ ದೊಡ್ಡಕುರುಬರ, ವಡಕಪ್ಪ ಬಾರಂಗಿ, ಬಸವರಾಜ್‌ ಚಕ್ರಸಾಲಿ, ನಾರಾಯಣ ಆರೇರ, ಮಹಾಂತೇಶ ಬಳ್ಳಾರಿ ಸೇರಿದಂತೆ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ