ಆ್ಯಪ್ನಗರ

ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ

ರಾಣೇಬೆನ್ನೂರ: ಸಮ್ಮಿಶ್ರ ಸರಕಾರದಲ್ಲಿ ಎರಡನೇ ಬಾರಿಗೆ ಸಚಿವರಾದ ನಂತರ ಸ್ಥಳೀಯ ಶಾಸಕ ಆರ್‌.ಶಂಕರ್‌, ನಗರದ ಗಂಗಾಜಲ ಚೌಡೇಶ್ವರಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು. ಈ ಸಮಯದಲ್ಲಿ ಅಭಿಮಾನಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.

Vijaya Karnataka 16 Jun 2019, 5:00 am
ರಾಣೇಬೆನ್ನೂರ: ಸಮ್ಮಿಶ್ರ ಸರಕಾರದಲ್ಲಿ ಎರಡನೇ ಬಾರಿಗೆ ಸಚಿವರಾದ ನಂತರ ಸ್ಥಳೀಯ ಶಾಸಕ ಆರ್‌.ಶಂಕರ್‌, ನಗರದ ಗಂಗಾಜಲ ಚೌಡೇಶ್ವರಿ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡರು. ಈ ಸಮಯದಲ್ಲಿ ಅಭಿಮಾನಿಗಳು ಅವರಿಗೆ ಭವ್ಯ ಸ್ವಾಗತ ಕೋರಿದರು.
Vijaya Karnataka Web the first priority for the development of the field
ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ


ನಂತರ ಅಭಿಮಾನಿಗಳು ಸಚಿವ ಆರ್‌.ಶಂಕರ್‌ ಅವರನ್ನು ತೆರೆದ ವಾಹನದಲ್ಲಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದರು.

ಈ ಸಮಯದಲ್ಲಿ ಮಾತನಾಡಿದ ಸಚಿವ ಆರ್‌.ಶಂಕರ್‌, ''ಸಚಿವನಾದರೂ ಸಹ ಮೊದಲು ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಉತ್ತಮ ಮತ್ತು ಮಾದರಿ ತಾಲೂಕನ್ನು ಮಾಡಲು ಪ್ರಮುಖ ಆದ್ಯತೆ ನೀಡುತ್ತೇನೆ. ಕ್ಷೇತ್ರದಲ್ಲಿ ಮರಳು ಸೇರಿದಂತೆ ಮತ್ತಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮೈತ್ರಿ ಸರಕಾರದ ಸಂಪುಟದಲ್ಲಿ ಯಾವುದೇ ಖಾತೆ ನೀಡಿದರೂ ಸಹ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ'' ಎಂದರು.

ರಾಜು ಅಡಿವೆಪ್ಪನವರ, ಜಗದೀಶ ಎಲಿಗಾರ, ಚಂದ್ರಣ್ಣ ಚಳಗೇರಿ, ಸೋಮಣ್ಣ ಚಳಗೇರಿ, ರಮೇಶ ಕರೆಡೆಣ್ಣನವರ, ಶಿವಯೋಗಿ ಮೋಟೆಬೆನ್ನೂರ, ಮೃತ್ಯುಂಜಯ ಗುದಿಗೇರ, ಚಂದ್ರಪ್ಪ ಕಾಳಪ್ಪನವರ, ಆನಂದ ಹುಲ್ಬನ್ನಿ, ನಿಂಗಪ್ಪ ಕೋಡಿಹಳ್ಳಿ ಹುಚ್ಚಪ್ಪ ಮೇಡ್ಲೇರಿ ಮತ್ತಿತರರು ಇದ್ದರು.

ಕಾರ್ಯಕರ್ತರು ಅವರೇ, ಬಾವುಟ ಬೇರೆಯಷ್ಟೇ ! : ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಕೆಪಿಜೆಪಿ ಪಕ್ಷ ವನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದ್ದ ಶಂಕರ, ನಗರಕ್ಕೆ ಶನಿವಾರ ಆಗಮಿಸಿದಾಗ ಮೂಲ ಕಾಂಗ್ರೆಸ್‌ ಕಾರ್ಯಕರ್ತರು ಒಬ್ಬರೂ ಕಂಡು ಬರಲಿಲ್ಲ. ಕೆಪಿಜೆಪಿ ಕಾರ್ಯಕರ್ತರೇ ಕಾಂಗ್ರೆಸ್‌ ಬಾವುಟ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ