ಆ್ಯಪ್ನಗರ

ಸಂತ್ರಸ್ತರು ಸೂಚಿಸಿದಲ್ಲಿ ಮನೆ ;ಶಾಸಕ ಓಲೇಕಾರ

ಹಾವೇರಿ: ಕಳೆದ ವರ್ಷ ಅತಿವೃಷ್ಟಿ ಹಾಗೂ ನೆರೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರು ಇಚ್ಛಿಸಿದಲ್ಲಿಮನೆ ಬಿದ್ದ ಜಾಗದ ಬದಲು ಅವರ ಬೇರೆ ಜಾಗದಲ್ಲಿಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.

Vijaya Karnataka 31 Jul 2020, 5:00 am
ಹಾವೇರಿ: ಕಳೆದ ವರ್ಷ ಅತಿವೃಷ್ಟಿ ಹಾಗೂ ನೆರೆಯಿಂದ ಮನೆ ಕಳೆದುಕೊಂಡ ಸಂತ್ರಸ್ತರು ಇಚ್ಛಿಸಿದಲ್ಲಿಮನೆ ಬಿದ್ದ ಜಾಗದ ಬದಲು ಅವರ ಬೇರೆ ಜಾಗದಲ್ಲಿಮನೆ ನಿರ್ಮಾಣ ಮಾಡಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಶಾಸಕ ನೆಹರು ಓಲೇಕಾರ ತಿಳಿಸಿದರು.
Vijaya Karnataka Web 30 HVR 1--_23


ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಜಿ.ಪಂ. ಅಧ್ಯಕ್ಷ ಬಸನಗೌಡ ದೇಸಾಯಿ ಅವರ ಅಧ್ಯಕ್ಷತೆಯಲ್ಲಿಗುರುವಾರ ಜರುಗಿದ ಸಾಮಾನ್ಯ ಸಭೆಯಲ್ಲಿವಿವಿಧ ಜಿಪಂ ಸದಸ್ಯರು ಎತ್ತಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಕುರಿತು ಈಗಾಗಲೇ ಸಭೆ ಕರೆದು ಚರ್ಚಿಸಲಾಗಿದ್ದು, ಫಲಾನುಭವಿಗಳು ಇಚ್ಚಿಸಿದ ಜಾಗೆಯಲ್ಲಿಮನೆ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಯಾವುದೇ ಗೊಂದಲ ಇಲ್ಲಎಂದು ಹೇಳಿದರು.

ನೆರೆ ಪರಿಹಾರದಡಿ ಹೊಸ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಮಂಜೂರಾದ ಫಲಾನುಭವಿಗಳಿಗೆ ಕೊನೆಯ ಕಂತಿನ ಹಣ ಪಾವತಿಯಾಗಿರುವುದಿಲ್ಲಎಂಬ ಸದಸ್ಯರ ದೂರುಗಳಿಗೆ ಉತ್ತರಿಸಿದ ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಪರಿಹಾರ ಪಾವತಿಸಲು ಹಣದ ಕೊರತೆ ಇಲ್ಲ. ತಾಂತ್ರಿಕ ತೊಂದರೆಯಿಂದ ವಿಳಂಬವಾಗಿರಬಹುದು. ಅಧಿಕಾರಿಗಳಿಗೆ ಸೂಚಿಸಿ ಕೊನೆಯ ಕಂತಿನ ಹಣ ಪಾವತಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ರೈತ ಆತ್ಮಹತ್ಯೆ:
ರೈತ ಆತ್ಮಹತ್ಯೆ ಪ್ರಕರಣಗಳಿಗೆ 5 ಲಕ್ಷ ರೂ. ಪರಿಹಾರ ನೀಡುವ ಕಾರ್ಯ ತಾಂತ್ರಿಕ ಕಾರಣಗಳಿಂದ ವಿಳಂಬವಾಗಿದೆ. ಮೊದಲು ಕಂದಾಯ ಇಲಾಖೆಯಿಂದ ಪಾವತಿಸಲಾಗುತ್ತಿತ್ತು. 5 ಲಕ್ಷ ರೂ. ಪರಿಹಾರ ಘೋಷಣೆಯಾದ ಮೇಲೆ ಕೃಷಿ ಇಲಾಖೆಯಿಂದ ನೀಡಲು ಆದೇಶವಾಗಿತ್ತು. ಆದರೆ ಕೃಷಿ ಇಲಾಖೆ ಸರ್ಕಾರಕ್ಕೆ ಮನವಿ ಸಲ್ಲಿಸಿ ಕಂದಾಯ ಇಲಾಖೆಯಿಂದಲೇ ಪರಿಹಾರ ಪಾವತಿಗೆ ವಿನಂತಿಸಿದ ಕಾರಣ ಈ ಕುರಿತಂತೆ ಆದೇಶ ಹೊರಡಿಸುವ ಪ್ರಕ್ರಿಯೆ ಕಾರಣ ವಿಳಂಬವಾಗಿದೆ. ಶೀಘ್ರವೇ ಈ ಸಮಸ್ಯೆ ಪರಿಹಾರವಾಗಲಿದೆ ಎಂದು ತಿಳಿಸಿದರು.

ಸಾಮಾನ್ಯ ಸ್ಥಾಯಿ ಸಮಿತಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಹಾಗೂ ಯೋಜನಾ ಸ್ಥಾಯಿ ಸಮಿತಿ, ಸಾಮಾಜಿಕ ನ್ಯಾಯ ಸಮಿತಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ನಡಾವಳಿಗಳನ್ನು ಸಭೆಯಲ್ಲಿಮಂಡಿಸಿ ಅನುಮೋದಿಸಲಾಯಿತು.

ಸಭೆಯಲ್ಲಿಉಪಾಧ್ಯಕ್ಷೆ ಗಿರಿಜವ್ವ ಬ್ಯಾಲದಹಳ್ಳಿ, ಜಿಪಂ ಸಿಇಒ ರಮೇಶ ದೇಸಾಯಿ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ. ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ