ಆ್ಯಪ್ನಗರ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾನ್ವಿತರಿಗೆ ಅನ್ಯಾಯ

ಶಿಗ್ಗಾವಿ : ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರ ಅಗತ್ಯ ಕ್ರಮಕೆಕೊಂಡಾಗ ಮಾತ್ರ ವಿದ್ಯಾರ್ಥಿಗಳ ಶೆಕ್ಷಣಿಕ ಗುಣಮಟ್ಟ ಸುಧಾರಿಸಲು ಸಾಧ್ಯ ಎಂದು ಉದ್ಯಮಿ ಪಿ.ಡಿ. ಶಿರೂರ ಹೇಳಿದರು.

ವಿಕ ಸುದ್ದಿಲೋಕ 8 Apr 2016, 4:00 am
ಶಿಗ್ಗಾವಿ : ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರ ಅಗತ್ಯ ಕ್ರಮಕೆಕೊಂಡಾಗ ಮಾತ್ರ ವಿದ್ಯಾರ್ಥಿಗಳ ಶೆಕ್ಷಣಿಕ ಗುಣಮಟ್ಟ ಸುಧಾರಿಸಲು ಸಾಧ್ಯ ಎಂದು ಉದ್ಯಮಿ ಪಿ.ಡಿ. ಶಿರೂರ ಹೇಳಿದರು.
Vijaya Karnataka Web the question paper leak injustice talent
ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪ್ರತಿಭಾನ್ವಿತರಿಗೆ ಅನ್ಯಾಯ


ಪಟ್ಟಣದ ಗೌರಮ್ಮ ಅಂಕಲಕೋಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಬುಧವಾರ ನಡೆದ ಕಾಮರ್ಸ್ ಡೇ ಕಾರ್ಯಕ್ರಮ ಉದ್ಘಾಟಿಸಿ ಅವರು ಮತನಾಡಿದರು. ಇತ್ತೀಚೆಗೆ ವಿವಿಧ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗುತ್ತಿವೆ. ಇಂಥ ಕತ್ಯದ ಹಿಂದೆ ಕೆಲ ಧನದಾಹಿಗಳ ಕೆವಾಡವಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಪ್ರತಿಭಾನ್ವಿತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಸರಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೆಗೊಳ್ಳಬೇಕು ಎಂದರು.

ಪ್ರಾಚಾರ್ಯ ಪ್ರೊ.ಬಿ.ಜಿ.ಅರಿಷಿಣಗುಪ್ಪಿ ಮಾತನಾಡಿ, ವಿದ್ಯಾರ್ಥಿಗಳು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕಾರ್ಯನಿರ್ವಹಿಸಿದಾಗ ಮಾತ್ರ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದರು.

ಕಾಮರ್ಸ್ ಎಕ್ಸಪೋ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳಾದ ಅಕ್ಷತಾ, ಪೂಜಾ ಯಲಿಗಾರ, ಅನುಪಮಾ ದೇಶಪಾಂಡೆ, ಸವಿತಾ ತಮ್ಮ ಅನಿಸಿಕೆ ಹಂಚಿಕೊಂಡರು. ಡಾ.ಸಿ.ಎಂ.ಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್.ಎಸ್. ದೇವರಮನಿ, ಆದರ್ಶ ಪಾಟೀಲ, ಪ್ರೊ.ಎಂ.ಬಿ.ನಾಗಲಾಪುರ, ರೂಪಾ ಗೊಟಗೋಡಿ, ಶುಭಂ ಪಾಟೀಲ, ಪ್ರೊ.ಸಿ.ಎಸ್.ಕುಮ್ಮೂರ, ಡಾ.ಎಸ್.ಜಿ. ವಿಭೂತಿ, ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ