ಆ್ಯಪ್ನಗರ

ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ; ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

ಯಾವುದೇ ಕಾರಣಕ್ಕೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ಈ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ, ಎಲ್ಲಿಯೂ ಮಾತುಕತೆಯಾಗಿಲ್ಲ, ಯಾರೂ ಮಾತನಾಡಿಲ್ಲ. ಮುಂದಿನ ಮೂರುವರ್ಷ ಬಿಎಸ್‌ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ‌ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

Vijaya Karnataka Web 29 Sep 2020, 5:09 pm
ಹಾವೇರಿ: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆಯ ಪ್ರಶ್ನೆಯೇ ಇಲ್ಲ. ಮುಂದಿನ ಪೂರ್ಣ ಅವಧಿಯ ತನಕವೂ ಬಿಎಸ್‌ ಯಡಿಯೂರಪ್ಪನವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ.
Vijaya Karnataka Web Nalin kumar


ಹಾವೇರಿಯಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೆ ಮುಖ್ಯಮಂತ್ರಿ ಬದಲಾವಣೆಯಾಗುವುದಿಲ್ಲ. ಈ ಬಗ್ಗೆ ಎಲ್ಲೂ ಚರ್ಚೆಯಾಗಿಲ್ಲ, ಎಲ್ಲಿಯೂ ಮಾತುಕತೆಯಾಗಿಲ್ಲ, ಯಾರೂ ಮಾತನಾಡಿಲ್ಲ. ಮುಂದಿನ ಮೂರುವರ್ಷ ಬಿಎಸ್‌ವೈ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ‌ ಎಂದು ಹೇಳಿದರು.

ಮತ ಧ್ರುವೀಕರಣಕ್ಕಾಗಿ ಬೆಂಗಳೂರನ್ನೇ ಅಪಮಾನಿಸುವ ಕ್ಷುಲ್ಲಕ ಹೇಳಿಕೆ ಅಪರಾಧವೇ ಸರಿ; ತೇಜಸ್ವಿ ಸೂರ್ಯ ವಿರುದ್ಧ

ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ವಿವೇಚನೆ ಬಿಟ್ಡಿದ್ದು ಎಂದು ಹೇಳಿದರು. ಇನ್ನು ಸುರೇಶ್ ಅಂಗಡಿ ಮುಖ್ಯಮಂತ್ರಿ ಮಾಡಬೇಕು ಎಂದು ಹಿಂದೆ ಸಭೆಯಾಗಿತ್ತು ಎಂಬ ಸೋದರ ಮಾವ ಲಿಂಗರಾಜ ಹೇಳಿಕೆ ನೀಡಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಸುರೇಶ್ ಅಂಗಡಿ ನನಗೆ ಬಹಳ ಆತ್ಮೀಯರು ಅವರು ಆ ರೀತಿ ಎಂದೂ ಹೇಳಿಲ್ಲಾ ಎಂದು ಹೇಳಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಬ್ರಿಟೀಷರಿಗಿಂತ ಹೆಚ್ಚು ಸಮಾಜವನ್ನು ಒಡೆದಿದ್ದಾರೆ; ನಳಿನ್ ಕುಮಾರ್ ಕಟೀಲ್

ಇನ್ನು ನಿನ್ನೆಯ ಬಂದ್‌ಗೆ ಬೆಂಬಲ ಸೂಚಿಸಿ ಕಾಂಗ್ರೆಸ್‌ನವರು ಕಿಚ್ಚು ಹಚ್ಚುವ ಪ್ರಯತ್ನ ಮಾಡಿದ್ದಾರೆ ಎಂದಕಟೀಲ್, ಬಂದ್ ವಿಫಲವಾಗಿದೆ, ರಾಜ್ಯದ ಜನರು ಕೇಂದ್ರ, ರಾಜ್ಯ ಸರಕಾರದ ಪರವಾಗಿ ನಿಂತಿದ್ದಾರೆ‌ ಎಂದರು. ಅಲ್ಲದೇ ಕಾಂಗ್ರೆಸ್ ರೈತ ವಿರೋಧಿಯಾಗಿದೆ. ಅಧಿಕಾರ ಕಳೆದುಕೊಂಡಾಗ ಬೆಂಕಿ ಹಚ್ಚುವ ಕಲಸ ಕಾಂಗ್ರೆಸ್ ಹಿಂದೆಯೂ ಮಾಡಿದೆ. ಮುಂದೆಯೂ ಮಾಡುತ್ತಿರುತ್ತೆ ಎಂದು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ