ಆ್ಯಪ್ನಗರ

ಇಂದು ಕೃಷ್ಣ ಜಯಂತಿ

ಹಾವೇರಿ: ಹಾವೇರಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಯಿಂದ ಆಗಸ್ಟ್‌ 23 ರಂದು ರಾಣೇಬೆನ್ನೂರು, ಬ್ಯಾಡಗಿ ಹಾಗೂ ಹಾನಗಲ್‌ ತಾಲೂಕುಗಳಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆ ನಡೆಯಲಿದೆ.

Vijaya Karnataka 23 Aug 2019, 5:00 am
ಹಾವೇರಿ: ಹಾವೇರಿ ಭ್ರಷ್ಟಾಚಾರ ನಿಗ್ರಹದಳ ಪೊಲೀಸ್‌ ಠಾಣೆಯಿಂದ ಆಗಸ್ಟ್‌ 23 ರಂದು ರಾಣೇಬೆನ್ನೂರು, ಬ್ಯಾಡಗಿ ಹಾಗೂ ಹಾನಗಲ್‌ ತಾಲೂಕುಗಳಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ ಹಾಗೂ ಜನ ಸಂಪರ್ಕ ಸಭೆ ನಡೆಯಲಿದೆ.
Vijaya Karnataka Web today is krishna jayanti
ಇಂದು ಕೃಷ್ಣ ಜಯಂತಿ


ಆಗಸ್ಟ್‌ 23 ರಂದು ರಾಣೇಬೆನ್ನೂರು ತಹಶೀಲ್ದಾರ ಕಾರ್ಯಾಲಯ ಸಭಾಂಗಣದಲ್ಲಿ ಹಾಗೂ ಹಾನಗಲ್‌ ತಾಲೂಕು ಪಂಚಾಯತ್‌ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆವರೆಗೆ ಬ್ಯಾಡಗಿ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ಎಸಿಬಿ ಕಾರ್ಯ ವೈಖರಿ ಬಗ್ಗೆ ಮಾಹಿತಿ ನೀಡಲಾಗುತ್ತದೆ.

ವಿದ್ಯಾರ್ಥಿಗಳು, ಕಾರ್ಮಿಕರು, ವರ್ತಕರು, ಆಟೋ ಚಾಲಕರು ಹಾಗೂ ಇತರರು ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಗಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದು ಹಾಗೂ ಈ ಕಾರ್ಯಕ್ರಮದಲ್ಲಿ ತಮ್ಮ ಕುಂದುಕೊರತೆ/ಅಹವಾಲ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಹಾವೇರಿ ಭ್ರಷ್ಟಾಚಾರ ನಿಗ್ರಹದಳದ ಪೊಲೀಸ್‌ ಉಪಾಧೀಕ್ಷ ಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಎಸಿಬಿ ಡಿ.ಎಸ್‌.ಪಿ. (ಮೊ:9480806229), ಎಸಿಬಿ ಪಿ.ಐ(ಮೊ:9480806289/948080290) ಅಥವಾ ಹಾವೇರಿ ಎಸಿಬಿ ಪೊಲೀಸ್‌ ಠಾಣೆಯ ಸ್ಥಿರ ದೂರವಾಣಿ ಸಂಖ್ಯೆ:08375-235533 ಸಂಖ್ಯೆಗೆ ಸಂಪರ್ಕಿಸಬಹುದು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ