ಆ್ಯಪ್ನಗರ

ಇಂದು ಶ್ರಾವಣ ಸೋಮವಾರ ವಿಶೇಷ

ಹಾವೇರಿ: ಶ್ರಾವಣ ಮಾಸದ ಕೊನೆಯ ಸೋಮವಾರದಂದು (ಇಂದು) ಜಿಲ್ಲಾದ್ಯಂತ ನಾನಾ ದೇವಸ್ಥಾನಗಳಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ, ವಿಶೇಷ ಅಲಂಕಾರ, ಪ್ರವಚನ, ಪ್ರಸಾದ ಸೇರಿದಂತೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Vijaya Karnataka 26 Aug 2019, 5:00 am
ಹಾವೇರಿ: ಶ್ರಾವಣ ಮಾಸದ ಕೊನೆಯ ಸೋಮವಾರದಂದು (ಇಂದು) ಜಿಲ್ಲಾದ್ಯಂತ ನಾನಾ ದೇವಸ್ಥಾನಗಳಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ, ವಿಶೇಷ ಅಲಂಕಾರ, ಪ್ರವಚನ, ಪ್ರಸಾದ ಸೇರಿದಂತೆ ನಾನಾ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
Vijaya Karnataka Web today is the shravan monday special
ಇಂದು ಶ್ರಾವಣ ಸೋಮವಾರ ವಿಶೇಷ


ಹುಕ್ಕೇರಿಮಠ:

ನಗರದ ಹುಕ್ಕೇರಿಮಠದಲ್ಲಿ ಶಿವಬಸವ ಸ್ವಾಮಿಗಳ ಗದ್ದುಗೆ ವಿಶೇಷ ಅಲಂಕಾರ, ಅಭಿಷೇಕ, ಪೂಜೆ ಜರುಗುವುದು ತಿಂಗಳ ಪರ್ಯಾಂತ ಪ್ರವಚನ ಸಮಾರೋಪ ಕಾರ್ಯಕ್ರಮ ನಡೆಯಲಿದೆ.

ಹೊಸಮಠ:
ಹೊಸಮಠದ ಸಭಾಭವನದಲ್ಲಿ ಶ್ರಾವಣ ಮಾಸದ ನಿಮಿತ್ತ ತಿಂಗಳ ಪರ್ಯಾಂತ ಕಲ್ಯಾಣ ದರ್ಶನ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಚಿತ್ರದುರ್ಗ ಮಠದ ಶಿಮುಶ ಶರಣರು ಭಾಗವಹಿಸುವರು.

ಆಂಜನೇಯ ದೇವಸ್ಥಾನ: ಬಸವೇಶ್ವರ ನಗರದ ಸಿ ಬ್ಲಾಕ್‌ನಲ್ಲಿರುವ ಆಂಜನೇಯ ದೇವಸ್ಥಾನದಲ್ಲಿ ಶಿಶ್ರಗಜಾನನ ಹಾಗೂ ಆಂಜನೇಯ ದೇವಸ್ಥಾನದಲ್ಲಿ ದೇವಸ್ಥಾನ ಕಮೀಟಿ, ಬಸವೇಶ್ವರ ಮಹಿಳಾ ನಾಗರಿಕರ ವೇದಿಕೆ ಸಹಯೋಗದಲ್ಲಿ ದ್ವಾದಶ ಜ್ಯೋತಿರ್ಲಿಂಗಗಳಿಗೆ ರುದ್ರಾಭಿಷೇಕ, ಕುಂಕುಮಾರ್ಚನೆ ಜರುಗಲಿದೆ.

ಈ ವೇಳೆ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಕೂಡಲದ ಗುರುಮಹೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಹಾಮಂಗಳಾರತಿ ಆಶಿರ್ವಚನ ನಡೆಯಲಿದೆ. ನಂತರ ಅನ್ನ ಸಂತರ್ಪಣೆ ಜರುಗಲಿದೆ.

ಸಿಂಧಗಿ ಮಠ: ಸಿಂಧಗಿ ಮಠದಲ್ಲಿ ಪಟ್ಟದೇವರಿಗೆ ಗದ್ದುಗೆಗೆ ರುದ್ರಾಭಿಷೇಕ, ವಿಶೇಷ ಪೂಜೆ, ಮಹಾಮಂಗಳಾರತಿ ಮತ್ತು ಧಾರ್ಮಿಕ ಪಾಠ, ಅನ್ನ ಸಂತರ್ಪಣೆ ಜರುಗಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ