ಹಾವೇರಿ : ಸಮೃದ್ಧ ಜೀವನ ಹೆಸರಲ್ಲಿ ಸಾರ್ವಜನಿಕರಿಂದ ಸಂಗ್ರಹಿಸಿರುವ ಹಣವನ್ನು ಮರಳಿ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣೆ ಮತ್ತು ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ನೇತೃತ್ವದಲ್ಲಿ ಸಾವಿರಾರು ಏಂಜಟರ್ಗಳು ಸೇರಿ ಜೂ.24ರಂದು ಬೆಳಗ್ಗೆ 11 ಗಂಟೆಗೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸಮಿತಿ ರಾಜ್ಯಾಧ್ಯಕ್ಷ ಬಸವರಾಜ ಟೀಕೆಹಳ್ಳಿ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಹುಕ್ಕೇರಿಮಠದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ ಹೊಸಮನಿ ಸಿದ್ಧಪ್ಪ ವೃತ್ತಕ್ಕೆ ತಲುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಣವನ್ನು ಕೊಡಿಸುವಂತೆ ಒತ್ತಾಯಿಸಲಾಗುತ್ತದೆ ಎಂದರು.
ಮಹಾರಾಷ್ಟ್ರ ಮೂಲದ ಈ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಏಜೆಂಟರ ಮುಖಾಂತರ ಸಾವಿರಾರು ಕೋಟಿ ಹಣವನ್ನು ತುಂಬಿಸಿಕೊಂಡು ಲಾಭಾಂಶದೊಂದಿಗೆ ಹಣಮರಳಿಸದೆ ಹೂಡಿಕೆದಾರರಿಗೆ ವಂಚನೆ ಮಾಡಲಾಗಿದೆ ಎಂದು ತಿಳಿಸಿದರು.
ಏಜೆಂಟರು ಆರ್.ಡಿ, ಎಫ್ಡಿ, ಪಿಗ್ಮಿಗಳ ಮೂಲಕ ಹಣ ತುಂಬಿಸಿಕೊಂಡಿದ್ದಾರೆ. ಆ ಎಲ್ಲಾ ಹಣವನ್ನು ಸಂಸ್ಥೆ ಮರಳಿಸದೆ ತಪ್ಪಿಸಿಕೊಂಡಿದೆ. ಹಣ ಕಳೆದುಕೊಂಡವರು ಏಜೆಂಟರ ಮನೆಗೆ ಮುತ್ತಿಗೆ ಹಾಕಿ ಹಲ್ಲೆ ಮಾಡುತ್ತಿದ್ದಾರೆ. ಇದರಿಂದ ಏಜೆಂಟರ ಪರಿಸ್ಥಿತಿ ನೋಡತೀರದಾಗಿದೆ. ಅದರಲ್ಲಿಯೂ ಮಹಿಳೆಯರು ತುಂಬಾ ಸಮಸ್ಯೆ ಉಂಟಾಗಿ ಆತ್ಮಹತ್ಯೆ ದಾರಿಯನ್ನು ತುಳಿಯುತ್ತಿದ್ದಾರೆ ಎಂದರು.
ಮುಖ್ಯಮಂತ್ರಿಗಳು, ಗೃಹ ಸಚಿವರು 10 ದಿನಗಳ ಒಳಗೆ ಸೊಸೈಟಿ ವಿರುದ್ಧ ಕ್ರಮಕೈಗೊಂಡು ಜನರಿಗೆ ಹಣವನ್ನು ಕೊಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬೆಂಗಳೂರಿನ ಫ್ರೀಡ್ಂ ಪಾರ್ಕ್ನಿಂದ ಪ್ರತಿಭಟನೆ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳ ಮನೆ, ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಶಿವಶಂಕರ ಟೀಕಿಹಳ್ಳಿ, ಉಪಾಧ್ಯಕ್ಷ ಹರೀಶ ಇಂಗಳಗೊಂದಿ, ಮಹಿಳಾ ಅಧ್ಯಕ್ಷೆ ಲಕ್ಷ್ಮೇ ಜಿಂಗಾಡೆ, ಜಿಲ್ಲಾ ಸಂಚಾಲಕ ಮಾಲತೇಶ ಪಾಟೀಲ, ವಿಷ್ಣು ಜಿಂಗಾಡೆ, ಪರಮೇಶ್ವರ ಭಜಂತ್ರಿ, ಪ್ರೇಮಾ ಕಲಕೇರಿ, ಚಾಂದಸಾಬ ಯಲಗಚ್ಚ, ಮಾಲತೇಶ ಗೊಟಗೋಡಿ ಇನ್ನಿತರರು ಉಪಸ್ಥಿತರಿದ್ದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಹುಕ್ಕೇರಿಮಠದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ ಹೊಸಮನಿ ಸಿದ್ಧಪ್ಪ ವೃತ್ತಕ್ಕೆ ತಲುಪಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಹಣವನ್ನು ಕೊಡಿಸುವಂತೆ ಒತ್ತಾಯಿಸಲಾಗುತ್ತದೆ ಎಂದರು.
ಮಹಾರಾಷ್ಟ್ರ ಮೂಲದ ಈ ಸಂಸ್ಥೆಯು ರಾಜ್ಯದಲ್ಲಿ ಸಾವಿರಾರು ಏಜೆಂಟರ ಮುಖಾಂತರ ಸಾವಿರಾರು ಕೋಟಿ ಹಣವನ್ನು ತುಂಬಿಸಿಕೊಂಡು ಲಾಭಾಂಶದೊಂದಿಗೆ ಹಣಮರಳಿಸದೆ ಹೂಡಿಕೆದಾರರಿಗೆ ವಂಚನೆ ಮಾಡಲಾಗಿದೆ ಎಂದು ತಿಳಿಸಿದರು.
ಏಜೆಂಟರು ಆರ್.ಡಿ, ಎಫ್ಡಿ, ಪಿಗ್ಮಿಗಳ ಮೂಲಕ ಹಣ ತುಂಬಿಸಿಕೊಂಡಿದ್ದಾರೆ. ಆ ಎಲ್ಲಾ ಹಣವನ್ನು ಸಂಸ್ಥೆ ಮರಳಿಸದೆ ತಪ್ಪಿಸಿಕೊಂಡಿದೆ. ಹಣ ಕಳೆದುಕೊಂಡವರು ಏಜೆಂಟರ ಮನೆಗೆ ಮುತ್ತಿಗೆ ಹಾಕಿ ಹಲ್ಲೆ ಮಾಡುತ್ತಿದ್ದಾರೆ. ಇದರಿಂದ ಏಜೆಂಟರ ಪರಿಸ್ಥಿತಿ ನೋಡತೀರದಾಗಿದೆ. ಅದರಲ್ಲಿಯೂ ಮಹಿಳೆಯರು ತುಂಬಾ ಸಮಸ್ಯೆ ಉಂಟಾಗಿ ಆತ್ಮಹತ್ಯೆ ದಾರಿಯನ್ನು ತುಳಿಯುತ್ತಿದ್ದಾರೆ ಎಂದರು.
ಮುಖ್ಯಮಂತ್ರಿಗಳು, ಗೃಹ ಸಚಿವರು 10 ದಿನಗಳ ಒಳಗೆ ಸೊಸೈಟಿ ವಿರುದ್ಧ ಕ್ರಮಕೈಗೊಂಡು ಜನರಿಗೆ ಹಣವನ್ನು ಕೊಡಿಸುವ ಕೆಲಸ ಮಾಡಬೇಕು. ಇಲ್ಲದಿದ್ದರೆ ಬೆಂಗಳೂರಿನ ಫ್ರೀಡ್ಂ ಪಾರ್ಕ್ನಿಂದ ಪ್ರತಿಭಟನೆ ಮೆರವಣಿಗೆ ನಡೆಸಿ, ಮುಖ್ಯಮಂತ್ರಿಗಳ ಮನೆ, ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವಾಧ್ಯಕ್ಷ ಶಿವಶಂಕರ ಟೀಕಿಹಳ್ಳಿ, ಉಪಾಧ್ಯಕ್ಷ ಹರೀಶ ಇಂಗಳಗೊಂದಿ, ಮಹಿಳಾ ಅಧ್ಯಕ್ಷೆ ಲಕ್ಷ್ಮೇ ಜಿಂಗಾಡೆ, ಜಿಲ್ಲಾ ಸಂಚಾಲಕ ಮಾಲತೇಶ ಪಾಟೀಲ, ವಿಷ್ಣು ಜಿಂಗಾಡೆ, ಪರಮೇಶ್ವರ ಭಜಂತ್ರಿ, ಪ್ರೇಮಾ ಕಲಕೇರಿ, ಚಾಂದಸಾಬ ಯಲಗಚ್ಚ, ಮಾಲತೇಶ ಗೊಟಗೋಡಿ ಇನ್ನಿತರರು ಉಪಸ್ಥಿತರಿದ್ದರು.