ಆ್ಯಪ್ನಗರ

ಗಣೇಶೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ

ಅಕ್ಕಿಆಲೂರು: ಗಣೇಶೋತ್ಸವಕ್ಕೆ ಪಟ್ಟಣ ಸಜ್ಜಾಗಿದ್ದು, ಇಲ್ಲಿನ ಬಸ್‌ ನಿಲ್ದಾಣದ ಬಳಿಯ ವರಸಿದ್ಧಿ ಆಂಜನೇಯ ದೇವಸ್ಥಾನದ ಎದುರು ಹಿಂದೂ ಯುವ ಸೇನೆ ಹಾಗೂ ನೇತಾಜಿ ಸುಭಾಸ್‌ಚಂದ್ರ ಬೋಸ್‌ ಯುವಕ ಮಂಡಳದ ಆಶ್ರಯದಲ್ಲಿ ಸಾಂಕೇತಿಕವಾಗಿ ಭಗವಾಧ್ವಜಾರೋಹಣ ಮೂಲಕ ಸಾಂಪ್ರದಾಯಿಕ ಚಾಲನೆ ನೀಡಲಾಯಿತು.

Vijaya Karnataka 26 Aug 2019, 5:00 am
ಅಕ್ಕಿಆಲೂರು: ಗಣೇಶೋತ್ಸವಕ್ಕೆ ಪಟ್ಟಣ ಸಜ್ಜಾಗಿದ್ದು, ಇಲ್ಲಿನ ಬಸ್‌ ನಿಲ್ದಾಣದ ಬಳಿಯ ವರಸಿದ್ಧಿ ಆಂಜನೇಯ ದೇವಸ್ಥಾನದ ಎದುರು ಹಿಂದೂ ಯುವ ಸೇನೆ ಹಾಗೂ ನೇತಾಜಿ ಸುಭಾಸ್‌ಚಂದ್ರ ಬೋಸ್‌ ಯುವಕ ಮಂಡಳದ ಆಶ್ರಯದಲ್ಲಿ ಸಾಂಕೇತಿಕವಾಗಿ ಭಗವಾಧ್ವಜಾರೋಹಣ ಮೂಲಕ ಸಾಂಪ್ರದಾಯಿಕ ಚಾಲನೆ ನೀಡಲಾಯಿತು.
Vijaya Karnataka Web HVR-25AKR2


ಧ್ವಜಾರೋಹಣ ನೆರವೇರಿಸಿದ ಸ್ನೇಹಮೈತ್ರಿ ನೇತ್ರದಾನಿಗಳ ಬಳಗದ ಕರಬಸಪ್ಪ ಗೊಂದಿ ಮಾತನಾಡಿ, ಗಣೇಶೋತ್ಸವಕ್ಕೆ ನೂರಾರು ವರ್ಷಗಳ ಇತಿಹಾಸವಿದ್ದು, ಯುವ ಸಮೂಹ ಇತಿಹಾಸ ಅರಿವು ಅರ್ಥಪೂರ್ಣ ಆಚರಣೆಗೆ ಮುಂದಾಗಬೇಕಿದೆ. ಹಬ್ಬ-ಹರಿದಿನಗಳ ನೆಪದಲ್ಲಿ ಎಲ್ಲರೂ ಒಂದೆಡೆ ಸೇರುವುದರಿಂದ ಸಹೋದರತೆಯ ಭಾವನೆ ಮೂಡಲಿದೆ ಎಂದರು.

ಹಿಂದೂ ಯುವ ಸೇನೆ ಹಾಗೂ ನೇತಾಜಿ ಸುಭಾಸ್‌ಚಂದ್ರ ಬೋಸ್‌ ಯುವಕ ಮಂಡಳದ ಪದಾಧಿಕಾರಿಗಳು, ಕಾರ್ಯಕರ್ತರು, ಹಿಂದೂಪರ ಸಂಘಟನೆಗಳ ಸದಸ್ಯರು ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ