ಆ್ಯಪ್ನಗರ

ಕ್ಷಯರೋಗ ಪತ್ತೆ ಚಿಕಿತ್ಸಾ ಆಂದೋಲನ

ರಾಣೇಬೆನ್ನೂರ : ಕ್ಷಯ ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆಯಾಗಿದ್ದು, ಅಲಕ್ಷ ್ಯ ಮಾಡಿದರೆ ಪ್ರಾಣಕ್ಕೆ ಕುತ್ತಾಗುವ ಸಾಧ್ಯತೆಯಿರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸೋಮಶೇಖರ ಸಣ್ಮನಿ ಹೇಳಿದರು.

Vijaya Karnataka 17 Jul 2019, 5:00 am
ರಾಣೇಬೆನ್ನೂರ : ಕ್ಷಯ ರೋಗವು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆಯಾಗಿದ್ದು, ಅಲಕ್ಷ ್ಯ ಮಾಡಿದರೆ ಪ್ರಾಣಕ್ಕೆ ಕುತ್ತಾಗುವ ಸಾಧ್ಯತೆಯಿರುತ್ತದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸೋಮಶೇಖರ ಸಣ್ಮನಿ ಹೇಳಿದರು.
Vijaya Karnataka Web tuberculosis detection therapy movement
ಕ್ಷಯರೋಗ ಪತ್ತೆ ಚಿಕಿತ್ಸಾ ಆಂದೋಲನ


ನಗರದ ಇಸ್ಲಾಂಪುರ ಓಣಿಯ ಅಂಗನವಾಡಿ ಕೇಂದ್ರದಲ್ಲಿ ಸಕ್ರೀಯ ಕ್ಷ ಯ ರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನ 2019ಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ಷ ಯರೋಗವನ್ನು ಶೀಘ್ರವಾಗಿ ಪತ್ತೆ ಹಚ್ಚಿ ಚಿಕಿತ್ಸೆ ನೀಡಲು ಆಂದೋಲನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಇದರ ಉಪಯೋಗ ಮಾಡಿಕೊಳ್ಳಬೇಕು ಎಂದರು.

ಸಾರ್ವಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ರಾಜೇಶ್ವರಿ ಕದರಮಂಡಲಗಿ ಮಾತನಾಡಿ, ಆಂದೋಲನದ ಅಂಗವಾಗಿ ಕ್ಷ ಯರೋಗವನ್ನು ಪತ್ತೆ ಹಚ್ಚಿ ಉಚಿತವಾಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಚಿಕಿತ್ಸೆ ಪಡೆಯುವ ಕ್ಷ ಯ ರೋಗಿಗಳಿಗೆ ಪೌಷ್ಠಿಕ ಆಹಾರ ಸೇವೆನೆ ಮಾಡಲು ತಿಂಗಳಿಗೆ ರೂ.500 ಸಹಾಯ ಧನವನ್ನು ಚಿಕಿತ್ಸೆ ಮುಗಿಯುವವರೆಗೂ ಅವರ ಬ್ಯಾಂಕ್‌ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಎಂದರು. ನಗರಸಭಾ ಸದಸ್ಯ ಹಬಿಬುಲ್ಲಾ ಕಂಬಳಿ, ಜಗದೀಶ ಪಾಟೀಲ, ಗಿರೀಶ ಮುರನಾಳ, ಭಾನುವಳ್ಳಿ, ರಾಮರಾಜ ಪಲ್ಲಿ, ಗಿರಿಜಮ್ಮ, ಮಾಲಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ