ಆ್ಯಪ್ನಗರ

ತುಂಗಭದ್ರಾ ನದಿಗೆ 2 ಟಿಎಂಸಿ ನೀರು

ಹಾವೇರಿ: ಹಾವೇರಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಭಾಗದ ತುಂಗಭದ್ರಾ ನದಿ ಆಧಾರಿತ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಭದ್ರಾ ಜಲಾಶಯದಿಂದ ಎರಡು ಟಿ.ಎಂ.ಸಿ. ನೀರನ್ನು ಹರಿಸಲು ಮೈಸೂರು ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Vijaya Karnataka 22 Mar 2019, 5:00 am
ಹಾವೇರಿ: ಹಾವೇರಿ, ಗದಗ, ದಾವಣಗೆರೆ ಹಾಗೂ ಬಳ್ಳಾರಿ ಭಾಗದ ತುಂಗಭದ್ರಾ ನದಿ ಆಧಾರಿತ ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಭದ್ರಾ ಜಲಾಶಯದಿಂದ ಎರಡು ಟಿ.ಎಂ.ಸಿ. ನೀರನ್ನು ಹರಿಸಲು ಮೈಸೂರು ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Vijaya Karnataka Web tungabhadra river has 2 tmc of water
ತುಂಗಭದ್ರಾ ನದಿಗೆ 2 ಟಿಎಂಸಿ ನೀರು


ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ತುಂಗಭದ್ರಾ ನದಿ ಅವಲಂಬಿತ ನಾಲ್ಕು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ಜಿಲ್ಲಾಧಿಕಾರಿಗಳ ಮನವಿ ಆಧರಿಸಿ ಹಾಗೂ ಕುಡಿಯುವ ನೀರಿನ ಅಗತ್ಯತೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ 19-03-2019 ರಿಂದ ದಿನಂಪ್ರತಿ 1700 ಕ್ಯೂಸೆಕ್ಸ್‌, ಉಳಿದ 12 ದಿನಗಳ ಕಾಲ ದಿನಂಪ್ರತಿ 1500 ಕ್ಯೂಸೆಕ್ಸ್‌ನಂತೆ ಎರಡು ಟಿ.ಎಂ.ಸಿ. ನೀರನ್ನು ನದಿಗೆ ಹರಿಸಲು ಕರ್ನಾಟಕ ನೀರಾವರಿ ನಿಗಮದ ಭದ್ರಾ ಯೋಜನೆ ವೃತ್ತದ ಅಧೀಕ್ಷ ಕ ಅಭಿಯಂತರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಜಲಾಶಯದಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ನದಿಗೆ ಹರಿಸಲಾದ ನೀರನ್ನು ಕಡ್ಡಾಯವಾಗಿ ಜನ ಜಾನುವಾರುಗಳಿಗೆ ಕುಡಿಯಲು ಮಾತ್ರ ಬಳಸತಕ್ಕದ್ದು. ಯಾವುದೇ ಕಾರಣಕ್ಕೂ ಅನ್ಯತಾ ಉದ್ದೇಶಕ್ಕೆ ಬಳಸದಂತೆ ಆಯಾ ಜಿಲ್ಲಾಧಿಕಾರಿಗಳು ಕಾರ್ಯಪಡೆಗಳನ್ನು ರಚಿಸಿ ನಿಗಾವಹಿಸಲು ಪ್ರಾದೇಶಿಕ ಆಯುಕ್ತರು ಸೂಚಿಸಿ ಈ ಕುರಿತು ನಿತ್ಯ ವರದಿ ಸಲ್ಲಿಸುವಂತೆ ಆದೇಶಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ