ಆ್ಯಪ್ನಗರ

ವಚನಕಾರರ, ಶರಣರ ತತ್ವ ಸಿದ್ಧಾಂತ ದಾರಿದೀಪ

ಹಾವೇರಿ: ಸಮಾಜದ ಅಭಿವೃದ್ಧಿ, ಸಂಸ್ಕೃತಿಯ ಬೆಳವಣಿಗೆ ಹಾಗೂ ಪರಂಪರೆ ಉಳಿವಿಗಾಗಿ ವಚನಕಾರರ ಹಾಗೂ ಶಿವಶರಣರ ತತ್ವ ಸಿದ್ಧಾಂತಗಳು ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಲೀಲಾವತಿ ಹೇಳಿದರು.

Vijaya Karnataka 15 May 2019, 5:00 am
ಹಾವೇರಿ: ಸಮಾಜದ ಅಭಿವೃದ್ಧಿ, ಸಂಸ್ಕೃತಿಯ ಬೆಳವಣಿಗೆ ಹಾಗೂ ಪರಂಪರೆ ಉಳಿವಿಗಾಗಿ ವಚನಕಾರರ ಹಾಗೂ ಶಿವಶರಣರ ತತ್ವ ಸಿದ್ಧಾಂತಗಳು ದಾರಿದೀಪವಾಗಿವೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಲೀಲಾವತಿ ಹೇಳಿದರು.
Vijaya Karnataka Web HVR-14 HAVERI 8


ಹಾವೇರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ನಡೆದ ಬಸವಣ್ಣ, ಶಂಕರಾಚಾರ್ಯ, ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಹಾಗೂ ಭಗೀರಥ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಸವಣ್ಣನವರು ಮೇಲು-ಕೀಳು ಎಂಬ ಬೇಧ ಭಾವ ಹೋಗಲಾಡಿಸಲು ಹಾಗೂ ಸಮ ಸಮಾಜ ನಿರ್ಮಾಣ ಮಾಡಲು ಶ್ರಮಿಸಿದವರು. 12ನೇ ಶತಮಾನದಲ್ಲಿ ವಚನ ಸಾಹಿತ್ಯದ ಮೂಲಕ ಸಮಾಜದ ಸುಧಾರಣೆಗೆ ಮುಂದಾದ ವಚನಕಾರರು ವೈಚಾರಿಕ ಚಿಂತನೆಗಳು, ಮಾನವೀಯ ಮೌಲ್ಯಗಳನ್ನು ಸಾರಿದರು. ಅವರ ತತ್ವ ಸಿದ್ಧಾಂತಗಳು ಜೀವನ ಆದರ್ಶಗಳು ಸಾರ್ವಕಾಲಿಕ. ಬಸವಣ್ಣನವರ ಮಾನವೀಯ ಮೌಲ್ಯಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಸಾರ್ವಜನಿಕ ಶಿಕ್ಷ ಣ ಇಲಾಖೆಯ ಮಂಜಣ್ಣ ಮಾತನಾಡಿ, ಬಸವಣ್ಣ ಅವರು ಮಹಾಮಾನವತಾವಾದಿಗಳು. ಜಾತಿ, ಮತ, ಪಂಥಗಳ ಬೇಧವಿಲ್ಲದೆ ಎಲ್ಲರು ಸರಿಮಾನರು ಎಂದು ಅಪ್ಪಿಕೊಂಡವರು. ಅವರ ವಚನಗಳು ಸಮಾಜ ಸುಧಾರಣೆಗೆ ಸಹಕಾರಿಯಾಗಿವೆ ಹಾಗೂ ಆದಿ ಗುರು ಶಂಕರಾಚಾರ್ಯರು ತಮ್ಮ ತತ್ವ ಸಿದ್ಧಾಂತಗಳಿಂದ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಯೂರಿದ್ದಾರೆ ಎಂದು ಹೇಳಿದರು.

ಉಪನ್ಯಾಸಕ ಕಾಂತೇಶ ರೆಡ್ಡಿ ಮಾತನಾಡಿ, ಶಿವರಣೆ ಹೇಮರಡ್ಡಿ ಮಲ್ಲಮ್ಮ ಆಚಾರ, ವಿಚಾರ ಹಾಗೂ ದಾನ, ಧರ್ಮ ತ್ಯಾಗ ಮನೋಭಾವದಿಂದ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಎಸ್‌. ಚಿನ್ನಿಕಟ್ಟಿ, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ