ಆ್ಯಪ್ನಗರ

ಚಿರತೆ ಪತ್ತೆಗೆ ಗ್ರಾಮಸ್ಥರ ಹುಡುಕಾಟ

ಶಿಗ್ಗಾವಿ :ತಾಲೂಕಿನ ಹುಲಿಕಟ್ಟಿ ಗ್ರಾಮದ ಹೊರ ವಲಯದಲ್ಲಿ ಶುಕ್ರವಾರ ಸಂಜೆ ಚಿರತೆ ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅಮಾವಾಸ್ಯೆ ನಿಮಿತ್ತ ಗ್ರಾಮದ ಯುವಕ ಹಾಲಪ್ಪ ಸೂರಣ್ಣವರ, ಸೋಮು ಹೆಗಡೆ ತಮ್ಮ ಹೊಲದಲ್ಲಿರುವ ದೇವರಿಗೆ ಪೂಜೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳುತ್ತಿರುವಾಗ ಚಿರತೆ ಗೋಚರಿಸಿದೆ. ಚಿರತೆ ಕಂಡು ಗಾಬರಿಗೊಂಡ ಯುವಕರು ಗ್ರಾಮಸ್ಥರಿಗೆ ಈ ವಿಷಯ ತಿಳಿಸಿದ್ದಾರೆ.

Vijaya Karnataka 15 Jul 2018, 5:00 am
ಶಿಗ್ಗಾವಿ :ತಾಲೂಕಿನ ಹುಲಿಕಟ್ಟಿ ಗ್ರಾಮದ ಹೊರ ವಲಯದಲ್ಲಿ ಶುಕ್ರವಾರ ಸಂಜೆ ಚಿರತೆ ಕಂಡು ಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಅಮಾವಾಸ್ಯೆ ನಿಮಿತ್ತ ಗ್ರಾಮದ ಯುವಕ ಹಾಲಪ್ಪ ಸೂರಣ್ಣವರ, ಸೋಮು ಹೆಗಡೆ ತಮ್ಮ ಹೊಲದಲ್ಲಿರುವ ದೇವರಿಗೆ ಪೂಜೆ ಸಲ್ಲಿಸಿ ಸ್ವಗ್ರಾಮಕ್ಕೆ ಮರಳುತ್ತಿರುವಾಗ ಚಿರತೆ ಗೋಚರಿಸಿದೆ. ಚಿರತೆ ಕಂಡು ಗಾಬರಿಗೊಂಡ ಯುವಕರು ಗ್ರಾಮಸ್ಥರಿಗೆ ಈ ವಿಷಯ ತಿಳಿಸಿದ್ದಾರೆ.
Vijaya Karnataka Web village search for leopard detection
ಚಿರತೆ ಪತ್ತೆಗೆ ಗ್ರಾಮಸ್ಥರ ಹುಡುಕಾಟ


ಶನಿವಾರ ಬೆಳಗ್ಗೆ ಗ್ರಾಮಸ್ಥರು ಚಿರತೆ ಸಂಚರಿಸಿದ ಜಾಗದಲ್ಲಿ ಹೆಜ್ಜೆ ಗುರುತುಗಳನ್ನು ಗಮನಿಸಿ, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಹೆಜ್ಜೆ ಗುರುತುಗಳನ್ನು ಗಮನಿಸಿ ಚಿರತೆ ಬಂದಿರುವುದನ್ನು ಖಚಿತಪಡಿಸಿಕೊಂಡು, ಗ್ರಾಮಸ್ಥರೊಂದಿಗೆ ಸಂಜೆಯವರೆಗೆ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ. ಆದರೆ ಚಿರತೆ ಬಗ್ಗೆ ಹೆಚ್ಚಿನ ಸುಳಿವು ಸಿಗದೆ ಇದ್ದುದರಿಂದ ನಾಳೆ ಮತ್ತೆ ಅಕ್ಕ ಪಕ್ಕದ ಗ್ರಾಮಗಳ ಹೊರ ವಲಯದಲ್ಲಿ ಶೋಧ ಕಾರ್ಯ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ