ಆ್ಯಪ್ನಗರ

ಮತದಾನ ಮಾಡಿ, ಪ್ರಜಾಪ್ರಭುತ್ವದ ಮೌಲ್ಯ ಉಳಿಸಿ

ಅಕ್ಕಿಆಲೂರು: ಮತದಾನ ನಮ್ಮ ಹಕ್ಕು, ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಮುಂದಾಗಬೇಕಿದೆ ಎಂದು ಪ್ರಾಚಾರ್ಯ ಎನ್‌.ಡಿ.ಮಾಚೇನಹಳ್ಳಿ ಹೇಳಿದರು.

Vijaya Karnataka 30 Nov 2019, 5:00 am
ಅಕ್ಕಿಆಲೂರು: ಮತದಾನ ನಮ್ಮ ಹಕ್ಕು, ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆಗೊಳಿಸಿ ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿಗೆ ಮುಂದಾಗಬೇಕಿದೆ ಎಂದು ಪ್ರಾಚಾರ್ಯ ಎನ್‌.ಡಿ.ಮಾಚೇನಹಳ್ಳಿ ಹೇಳಿದರು.
Vijaya Karnataka Web vote save democratic value
ಮತದಾನ ಮಾಡಿ, ಪ್ರಜಾಪ್ರಭುತ್ವದ ಮೌಲ್ಯ ಉಳಿಸಿ


ಕೂಸನೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಮತದಾರರ ಜಾಗೃತಿ ಕೇಂದ್ರ (ಇಎಲ್‌ಸಿ) ಆಶ್ರಯದಲ್ಲಿರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಪೋಸ್ಟರ್‌ ಮೇಕಿಂಗ್‌ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.

ಚುನಾವಣೆಯ ಸಂದರ್ಭದಲ್ಲಿಮತದಾನದಿಂದ ದೂರ ಉಳಿಯದೇ ಸಮರ್ಥ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದಾಗ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ. ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿಮತದಾನದ ಮಹತ್ವದ ಕುರಿತು ಜನಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ಉಪನ್ಯಾಸಕ ಡಾ.ವಸಂತ ನಾಯ್ಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿವಿದ್ಯಾವಂತರೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿಯುತ್ತಿದ್ದಾರೆ. ನಾವೆಲ್ಲಸ್ವಯಂಪ್ರೇರಿತರಾಗಿ ಮತದಾನ ಮಾಡಿ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮೆರಗು ನೀಡಬೇಕಿದೆ ಎಂದು ಹೇಳಿದ ಅವರು ಈ ನಿಟ್ಟಿನಲ್ಲಿವಿದ್ಯಾರ್ಥಿಗಳ ಪಾತ್ರ ಗಮನಾರ್ಹವಾಗಿದ್ದು, ಕಾಳಜಿ ವಹಿಸುವಂತೆ ಕಿವಿಮಾತು ಹೇಳಿದರು.

ಉಪನ್ಯಾಸಕರಾದ ಇಂದಿರಮ್ಮ ಹಳೆಮನಿ, ಅರ್ಜುನ ಹೊಂಗಲ್‌, ಪ್ರಕಾಶ್‌ ಬಿ., ಅಶೋಕ ಕರೆಗೌಡ್ರ, ವಿರುಪಾಕ್ಷಗೌಡ ಪಾಟೀಲ, ಅನಿತಾ ಭಟ್‌, ಉಮೇಶ್‌ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿವಿದ್ಯಾರ್ಥಿಗಳು ರಚಿಸಿದ ಮತದಾನದ ಮಹತ್ವ ಸಾದರ ಪಡಿಸುವ ಪೋಸ್ಟರ್‌ಗಳು ಗಮನ ಸೆಳೆಯುವಲ್ಲಿಯಶಸ್ವಿಯಾದವು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ