ಆ್ಯಪ್ನಗರ

ನೀರಿನ ಸಮಸ್ಯೆ ಕೂಡಲೇ ಸ್ಪಂದಿಸಿ: ಡಿಸಿ

ಸವಣೂರು : ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮತ್ತು ಸವಣೂರು ಪಟ್ಟಣದಲ್ಲಿ ಅಂತರ್ಜಲ ಕುಸಿತದಿಂದಾಗಿ ಪಟ್ಟಣ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಲು ಗ್ರಾ.ಪಂ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದರು.

Vijaya Karnataka 18 May 2019, 5:00 am
ಸವಣೂರು : ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮತ್ತು ಸವಣೂರು ಪಟ್ಟಣದಲ್ಲಿ ಅಂತರ್ಜಲ ಕುಸಿತದಿಂದಾಗಿ ಪಟ್ಟಣ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಲು ಗ್ರಾ.ಪಂ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಹೇಳಿದರು.
Vijaya Karnataka Web HVR-17SVR3


ಶುಕ್ರವಾರ ಸವಣೂರು ತಾಲೂಕಿನ ಕೆ.ಬಿ.ತಿಮ್ಮಾಪೂರ, ಕೃಷ್ಣಾಪೂರ ಹಾಗೂ ಶಿರಬಡಗಿ ಗ್ರಾಮಗಳಿಗೆ ಭೇಟಿ ನೀಡಿ ಗ್ರಾಮಗಳಲ್ಲಿರುವ ನೀರಿನ ತೊಂದರೆ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ, ಪರಿಹಾರಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.

ನಂತರ, ಸವಣೂರ ಪಟ್ಟಣದ ಉಪವಿಭಾಗಾಧಿಕಾರಿಗಳ ಕಚೇರಿಗೆ ಆಗಮಿಸಿದ ಅವರು, ಸವಣೂರು ಪಟ್ಟಣದಲ್ಲಿನ ನೀರು ಸರಬರಾಜು ವ್ಯವಸ್ಥೆಗಾಗಿ ಯೋಜನೆಯನ್ನು ಸಿದ್ಧಗೊಳಿಸಲಾಗಿದೆ. ಸಾರ್ವಜನಿಕರು ಅತೀ ನೀರಿನ ಕೊರತೆ ಅನುಭವಿಸುತ್ತಿರುವ ಸ್ಥಳಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ವ್ಯವಸ್ಥೆ ಕಲ್ಪಿಸಲಾಗುವದು. ನೀರಿನ ತೊಂದರೆ ಕಂಡು ಬಂದಲ್ಲಿ ಕೂಡಲೇ ತಾಲೂಕ ಆಡಳಿತ ವ್ಯವಸ್ಥೆಗೆ ಸಾರ್ವಜನಿಕರು ದೂರನ್ನು ನೀಡಬೇಕು ಎಂದರು.

ಉಪವಿಭಾಗಾಧಿಕಾರಿ ಭೋಯಾರ ಹರ್ಷಲ್‌ ನಾರಾಯಣರಾವ್‌, ತಹಶೀಲ್ದಾರ ವಿ.ಡಿ.ಸಜ್ಜನ್‌, ತಾ.ಪಂ ಇಒ ಎಸ್‌.ಎಂಡಿ. ಇಸ್ಮಾಯಿಲ್‌, ಎಡಿ ಎಸ್‌.ಎಚ್‌.ಅಮರಾಪೂರ, ಜಿ.ಪಂ ನೀರು ಮತ್ತು ನೈರ್ಮಲ್ಯ ಎಇಇ ಕೆ.ಪಿ. ಅರವಿಂದ, ಗ್ರಾ.ಪಂ ಪಿಡಿಒಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.



ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ