ಆ್ಯಪ್ನಗರ

ಹೈದರಾಬಾದ್ ಪಾಲಿಕೆ ಚುನಾವಣೆ: ಟಿಆರ್‌ಎಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ!

ಹೈದರಾಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆ ಮತದಾನದ ವೇಳೆ, ಆಡಳಿತಾರೂಢ ಟಿಆರ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಇಲ್ಲಿನ ಕುಕತ್‌ಪಲ್ಲಿ ಮತದಾನ ಕೇಂದ್ರದ ಬಳಿ ಟಿಆರ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ.

Vijaya Karnataka Web 1 Dec 2020, 6:32 pm
ಹೈದರಾಬಾದ್: ಹೈದರಾಬಾದ್ ಮಹಾನಗರ ಪಾಲಿಕೆ(GHMC) ಚುನಾವಣೆ ಮತದಾನದ ವೇಳೆ, ಆಡಳಿತಾರೂಢ ಟಿಆರ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.
Vijaya Karnataka Web TRS-BJP Clash
GHMC ಚುನಾವಣೆ ವೇಳೆ ಟಿಆರ್‌ಎಸ್-ಬಿಜೆಪಿ ಕಾರ್ಯಕರ್ತರ ಜಟಾಪಟಿ


ಇಲ್ಲಿನ ಕುಕತ್‌ಪಲ್ಲಿ ಮತದಾನ ಕೇಂದ್ರದ ಬಳಿ ಟಿಆರ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

ನಿಜಾಮ್‌ ಸಂಸ್ಕೃತಿಗೆ ಕೊನೆ ಹಾಡುವ ಶಪಥ..! ಹೈದರಾಬಾದ್‌ನಲ್ಲಿ ಅಮಿತ್‌ ಶಾ ಬಿರುಸಿನ ಪ್ರಚಾರ

ಕ್ಷುಲ್ಲಕ ಕಾರಣಕ್ಕೆ ಟಿಆರ್‌ಎಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪರಸ್ಪರ ಕೈ ಕೈ ಮಿಲಾಯಿಸಿದ್ದಾರೆ ಎನ್ನಲಾಗಿದೆ.


ಈ ವೇಳೆ ಟಿಆರ್‌ಎಸ್ ನಾಯಕರನ್ನೂ ಬಿಜೆಪಿ ಕಾರ್ಯಕರ್ತರು ಎಳೆದಾಡಿದ್ದಾರೆ ಎನ್ನಲಾಗಿದ್ದು, ತಮ್ಮ ನಾಯಕರನ್ನು ರಕ್ಷಿಸಲು ಟಿಆರ್‌ಎಸ್ ಕಾರ್ಯಕರ್ತೂ ಕೂಡ ಆವೇಶಭರಿತರಾಗಿ ವರ್ತಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್ ಪಾಲಿಕೆ ಚುನಾವಣೆ: ಅಮಿತ್ ಶಾ ಬರುವ ಮುನ್ನ ಬಿಜೆಪಿಗೆ ಕೆಸಿಆರ್ ಟಾಂಗ್!

GHMC ಚುನಾವಣೆಗೆ ಮತದಾನ ಪ್ರಕ್ರಿಯೆ ಮುಗಿದಿದ್ದು, 4 ಗಂಟೆಯವರೆಗೆ ಶೇ.29.76ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ