ಆ್ಯಪ್ನಗರ

ಸಂವಿಧಾನದಲ್ಲಿ ಲವ್ ಜಿಹಾದ್ ಬಗ್ಗೆ ವ್ಯಾಖ್ಯಾನವೇ ಇಲ್ಲ: 'ಬಿಜೆಪಿ ಕಾನೂನು' ಬೇಕಿಲ್ಲ ಎಂದ ಒವೈಸಿ!

ಲವ್ ಜಿಹಾದ್ ವಿರುದ್ಧ ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರಗಳು ಕಾನೂನು ರೂಪಿಸುತ್ತಿರುವುದಕ್ಕೆ, ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.

Vijaya Karnataka Web 29 Dec 2020, 4:28 pm
ಹೈದರಾಬಾದ್: ಲವ್ ಜಿಹಾದ್ ವಿರುದ್ಧ ಬಿಜೆಪಿ ಆಡಳಿತವಿರುವ ರಾಜ್ಯ ಸರ್ಕಾರಗಳು ಕಾನೂನು ರೂಪಿಸುತ್ತಿರುವುದಕ್ಕೆ, ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web owaishi-bhai
ಸಂಗ್ರಹ ಚಿತ್ರ


ಹೈದರಾಬಾದ್‌ನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಒವೈಸಿ, ಸಂವಿಧಾನದಲ್ಲಿ ಲವ್ ಜಿಹಾದ್ ಬಗ್ಗೆ ಯಾವುದೇ ವ್ಯಾಖ್ಯಾನವಿಲ್ಲ. ಆದರೆ ಬಿಜೆಪಿ ಕೇವಲ ರಾಜಕೀಯ ಲಾಭಕ್ಕಾಗಿ ಲವ್ ಜಿಹಾದ್ ಪದವನ್ನು ಸೃಷ್ಟಿಸಿದೆಯಲ್ಲದೇ, ಅದರ ವಿರುದ್ಧ ಕಾನೂನು ರೂಪಿಸುವ ನಾಟಕವಾಡುತ್ತಿದೆ ಎಂದು ಒವೈಸಿ ಹರಿಹಾಯ್ದಿದ್ದಾರೆ.

ಲವ್ ಜಿಹಾದ್ ವಿರುದ್ಧ ಬಿಜೆಪಿ ಆಡಳಿತವಿರುವ ರಾಜ್ಯಗಳು ಕಾನೂನು ರೂಪಿಸುವ ಮೂಲಕ ಸಂವಿಧಾನವನ್ನು ಅವಮಾನಿಸುತ್ತಿವೆ. ಅಸ್ತಿತ್ವದಲ್ಲೇ ಇಲ್ಲದ ಅಪರಾಧಕ್ಕೆ ಕಾನೂನು ರೂಪಿಸುವ ಮೂಲಕ ಬಿಜೆಪಿ ಸಂವಿಧಾನಕ್ಕೆ ಅಪಚಾರ ಎಸಗುತ್ತಿದೆ ಎಂದು ಒವೈಸಿ ಗಂಭೀರ ಆರೋಪ ಮಾಡಿದರು.

ಬಿಜೆಪಿಯಿಂದ ಲವ್ ಜಿಹಾದ್ ಎಂಬ ಭ್ರಮೆಯ ಸೃಷ್ಟಿ: ಅರುಣಾಚಲ ಮುಜುಗರಕ್ಕೆ ನಿತೀಶ್ ಟೀಂ ತಿರುಗೇಟು?

ಒಂದು ವೇಳೆ ಬಿಜೆಪಿಗೆ ಕಾನೂನು ಮಾಡಲೇಬೇಕಿದ್ದರೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕುರಿತು ಮಾಡಲಿ, ಉದ್ಯೋಗ ಸೃಷ್ಟಿಗಾಗಿ ಕಾನೂನು ತರಲಿ ಎಂದು ಆಗ್ರಹಿಸಿದ ಒವೈಸಿ, ರಾಜಕೀಯ ಲಾಭದ ಕುರಿತು ಚಿಂತಿಸುವುದನ್ನು ಬಿಟ್ಟು ಜ್ವಲಂತ ಸಮಸ್ಯೆಗಳ ಕುರಿತು ಬಿಜೆಪಿ ಚಿಂತಿಸಲಿ ಎಂದು ಒತ್ತಾಯಿಸಿದರು.


ಉತ್ತರಪ್ರದೇಶ, ಮಧ್ಯಪ್ರದೇಶದಲ್ಲಿ ಈಗಾಗಲೇ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿ ಮಾಡಲಾಗಿದ್ದು, ಕರ್ನಾಟಕವೂ ಸೇರಿದಂತೆ ಬಿಜೆಪಿ ಆಡಳಿತ ಇರುವ ಇತರ ರಾಜ್ಯಗಳು ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ದಟ್ಟವಾಗಿದೆ.

ಲವ್ ಜಿಹಾದ್ ತಡೆಗೆ ಕಾಯಿದೆ ತರಲು ನಿರ್ಧಾರ: ನಳಿನ್ ಕುಮಾರ್ ಕಟೀಲ್

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಲವ್‌ ಜಿಹಾದ್ ಪ್ರಸ್ತಾಪ ಬಿಜೆಪಿ ಹಾಗೂ ಎಐಎಂಐಎಂ ಎರಡೂ ಪಕ್ಷಗಳಿಗೆ ಮುಖ್ಯವಾಗಲಿದೆ. ಬಿಜೆಪಿ ಲವ್ ಜಿಹಾದ್ ವಿರುದ್ಧ ಧ್ವನಿ ಎತ್ತಲಿದ್ದರೆ, ಎಐಎಂಐಎಂ ಲವ್ ಜಿಹಾದ್ ಎಂಬುದು ಬಿಜೆಪಿ ಸೃಷ್ಟಿ ಎಂದು ಪ್ರಚಾರ ಮಾಡಲಿರುವುದು ಖಚಿತ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ