ಆ್ಯಪ್ನಗರ

ಕೊರೊನಾ ಪರಿಣಾಮ: ಶಾಸಕರು,ಸರಕಾರಿ ನೌಕರರ ಸಂಬಳ ಕಡಿತಗೊಳಿಸಿದ ತೆಲಂಗಾಣ

ಕೊರೊನಾ ಲಾಕ್‌ಡೌನ್‌ ಹಿನ್ನೆಲೆ ತೆಲಂಗಾಣ ಸರಕಾರದ ಆದಾಯಕ್ಕೆ ಹೊಡೆತ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸರಕಾರಿ ನೌಕರರ ಸಂಬಳ ಕಡಿತಗೊಳಿಸಲು ಅಲ್ಲಿನ ಸರಕಾರ ನಿರ್ಧರಿಸಿದೆ.

Vijaya Karnataka Web 31 Mar 2020, 1:17 pm
ಹೈದರಾಬಾದ್‌: ಕೊರೊನಾ ಲಾಕ್‌ಡೌನ್‌ನಿಂದ ರಾಜ್ಯದ ಬೊಕ್ಕಸಕ್ಕೆ ಬರಬೇಕಿದ್ದ ಆದಾಯಕ್ಕೆ ಭಾರಿ ಹೊಡೆತ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ನೌಕರರ ಸಂಬಳ ಕಡಿತಗೊಳಿಸಲು ತೆಲಂಗಾಣ ಸರಕಾರ ನಿರ್ಧರಿಸಿದೆ.
Vijaya Karnataka Web kcr


ಮುಖ್ಯಮಂತ್ರಿ, ಸಚಿವರು, ಶಾಸಕರು, ವಿಧಾನಪರಿಷತ್‌ ಸದಸ್ಯರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರ ಸಂಬಳವನ್ನು ಶೇ.75ರಷ್ಟು; ಐಎಎಸ್‌,ಐಪಿಎಸ್‌, ಐಎಫ್‌ಎಸ್‌ ಅಧಿಕಾರಿಗಳ ವೇತನವನ್ನು ಶೇ.60ರಷ್ಟು ಹಾಗೂ ವಿವಿಧ ನೌಕರರ ಸಂಬಳವನ್ನು ಶೇ.50ರಷ್ಟು ಹಾಗೂ 4ನೇ ದರ್ಜೆ ಮತ್ತು ಗುತ್ತಿಗೆ ನೌಕರರ ಸಂಬಳವನ್ನು ಶೇ.10ರಷ್ಟು ಕಡಿತ ಮಾಡಲು ಸಿಎಂ ಕೆ.ಚಂದ್ರಶೇಖರ ರಾವ್‌ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೊರೊನಾ ವೈರಸ್ ಹೆಚ್ಚುತ್ತಿರುವುದರಿಂದ ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ. ನಷ್ಟವಾಗಿದೆ ಹೀಗಾಗಿ, ನೌಕರರ ವೇತನ ಕತ್ತರಿಗೆ ನಿರ್ಧರಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ನಿಜಾಮುದ್ದೀನ್‌ ಮಸೀದಿಯ ಧಾರ್ಮಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದ ಆರು ಜನರು ರಾಜ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತೆಲಂಗಾಣ ಸಿಎಂ ಕೆ. ಚಂದ್ರಶೇಖರ್‌ ರಾವ್‌ ಹೇಳಿದ್ದು, ಈ ಮಾಹಿತಿ ಅಕ್ಷರಶಃ ಜನರನ್ನು ಭಯಭೀತರನ್ನಾಗಿಸಿದೆ. ಸದ್ಯ ತೆಲಂಗಾಣದಲ್ಲಿ 77 ಪ್ರಕರಣಗಳು ಬೆಳಕಿಗೆ ಬಂದಿದ್ದು 8 ಮಂದಿ ಸಾವನ್ನಪ್ಪಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ