ಆ್ಯಪ್ನಗರ

ಲಾಕ್‌ಡೌನ್‌ ಉಲ್ಲಂಘಿಸಿ ಶಾಸಕನ ಅದ್ಧೂರಿ ಜನ್ಮದಿನ ಆಚರಣೆ: ತೆಲಂಗಾಣ ಹೈಕೋರ್ಟ್‌ನಿಂದ ನೋಟಿಸ್‌

ಕೊರೊನಾ ವೈರಸ್‌ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಜಾರಿಗೊಳಿಸಿ, ಯಾವುದೇ ಕಾರ್ಯಕ್ರಮ ನಡೆಸದಂತೆ ಸರಕಾರ ನಿರ್ಬಂಧ ವಿಧಿಸಿದೆ. ಆದರೆ, ತೆಲಂಗಾಣದಲ್ಲಿ ಶಾಸಕರೊಬ್ಬರು ಜನ್ಮದಿನ ಆಚರಿಸಿಕೊಂಡಿದ್ದು, 500ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು, ಈಗ ತೆಲಂಗಾಣ ಹೈಕೋರ್ಟ್‌ ಶಾಸಕ, ಸರಕಾರ, ಡಿಸಿ ಹಾಗೂ ಎಸ್‌ಪಿಗೆ ನೋಟಿಸ್‌‌ ಜಾರಿಗೊಳಿಸಿದೆ.

TNN 22 May 2020, 8:06 pm
ಹೈದರಾಬಾದ್:‌ ಲಾಕ್‌ಡೌನ್‌ ಸಂದರ್ಭದಲ್ಲಿ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಂಡಿದ್ದ ನಾರಾಯಣಖೇಡದ ಟಿಆರ್‌ಎಸ್‌ ಶಾಸಕ ಎಂ.ಭೂಪಾಲ್‌ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಗುರುವಾರ ನೋಟಿಸ್‌‌ ಜಾರಿಗೊಳಿಸಿದ್ದು, ಘಟನೆಯ ಕುರಿತು ಅವರ ನಿಲುವನ್ನು ವಿವರಿಸುವಂತೆ ಸೂಚಿಸಿದೆ. ಪ್ರತಿಕ್ರಿಯೆಗಾಗಿ ಮೂರು ವಾರಗಳ ಸಮಯ ನೀಡಿದ್ದು, ವಿಚಾರಣೆ ಮುಂದೂಡಿದೆ.
Vijaya Karnataka Web Telangana


ಮೇ 7ರಂದು ಶಾಸಕರ ನಿವಾಸದಲ್ಲಿ ಅದ್ಧೂರಿ ಜನ್ಮದಿನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಲಾಕ್‌ಡೌನ್‌ ನಿಯಮ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದ್ದು, ಬಹಳಷ್ಟು ಜನ ಕಾರ್ಯಕ್ರಮದಲ್ಲಿ ಸೇರಿದ್ದರು. ಈ ಬಗ್ಗೆ ತೆಲಂಗಾಣ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿತ್ತು.


ಗುರುವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಶಾಸಕನಿಗಷ್ಟೇ ಅಲ್ಲದೇ ತೆಲಂಗಾಣ ಸರಕಾರ, ಸಂಗಾರೆಡ್ಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೂ ನೋಟಿಸ್‌‌ ಜಾರಿಗೊಳಿಸಲಾಗಿದೆ. ಸಾಮಾಜಿಕ ಕಾರ್ಯಕರ್ತ ಎಂ.ವಿಠಲ್‌ ಶಾಸಕನ ನಡೆ ವಿರುದ್ಧ ಪಿಐಎಲ್‌ ಸಲ್ಲಿಸಿದ್ದರು.

ತೆಲಂಗಾಣದ ಒಂದೇ ಬಾವಿಯಲ್ಲಿ 9 ಜನರ ಶವ ಪತ್ತೆ, ಸಾಮೂಹಿಕ ಆತ್ಮಹತ್ಯೆಯ ಶಂಕೆ

ಮುಖ್ಯ ನ್ಯಾಯಾಧೀಶ ರಾಘವೇಂದ್ರ ಸಿಂಗ್‌ ಚೌಹಾಣ್‌ ಹಾಗೂ ನ್ಯಾಯಮೂರ್ತಿ ಬಿ.ವಿಜಯಸೇನ್‌ ರೆಡ್ಡಿ ಅವರಿದ್ದ ಪೀಠಕ್ಕೆ ಅರ್ಜಿದಾರರ ಪರ ವಕೀಲ ಡಿ.ರಾಘವೆಂದ್ರ ರಾವ್‌, ಸಂಗಾರೆಡ್ಡಿ ಜಿಲ್ಲೆ ಕಿತ್ತಳೆ ವಲಯಕ್ಕೆ ಜಾರಿದ್ದು, ಕಾರ್ಯಕ್ರಮಗಳಲ್ಲಿ 20ಕ್ಕಿಂತ ಹೆಚ್ಚಿನ ಜನ ಭಾಗವಹಿಸುವಂತಿದ್ದಿಲ್ಲ. ಆದರೆ, ಶಾಸಕ ತಮ್ಮ 61ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದು, 500ಕ್ಕಿಂತ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು ತಿಳಿಸಿದ್ದಾರೆ.

ಗೆಳತಿ ಮನೆಯಿಂದ ಹೊರಬಂದ ರೌಡಿಯನ್ನು ಹಾಡಹಗಲೇ ಅಟ್ಟಾಡಿಸಿ ಕೊಂದರು..!

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಹಳಷ್ಟು ಜನ ಯಾವುದೇ ಮಾಸ್ಕ್‌ಗಳನ್ನು ಧರಿಸಿದ್ದಿಲ್ಲ ಎಂದು ವಿಠಲ್‌ ಹೇಳಿದ್ದಾರೆ. ಲಾಕ್‌ಡೌನ್‌ ನಿಯಮ ಉಲ್ಲಂಘಿಸಿದರೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯಿದೆ 51 (ಬಿ)ಯಂತೆ ಒಂದು ವರ್ಷದ ಜೈಲು ಶಿಕ್ಷೆ ಅಥವಾ ಅಂತಹ ಕಾರ್ಯಕ್ರಮದಲ್ಲಿ ಯಾವುದಾದರೂ ಸಾವು ಸಂಭವಿಸಿದರೆ 2 ವರ್ಷಕ್ಕೆ ಶಿಕ್ಷೆ ವಿಸ್ತರಿಸಬಹುದು.

ತೆಲಂಗಾಣದಲ್ಲಿ ಕ್ರಾಂತಿಕಾರಿ ನಿರ್ಣಯ..! ರೈತರು ಬೆಳೆಯುವ ಬೆಳೆ ನಿರ್ಧರಿಸಲಿರುವ ಸರಕಾರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ