ಆ್ಯಪ್ನಗರ

ತೆಲಂಗಾಣದಲ್ಲಿ ಮಹಾಮಳೆಗೆ 70 ಬಲಿ, ಹೈದರಾಬಾದ್‌ನಲ್ಲೇ 33 ಸಾವು

ಇದರ ನಡುವೆ ರಾಜ್ಯದಲ್ಲಿ ಇನ್ನೂ 4 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿರುವುದು ಜನರು ಮತ್ತು ಸರಕಾರದ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

Agencies 19 Oct 2020, 11:03 pm
ಹೈದರಾಬಾದ್‌: ತೆಲಂಗಾಣದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಬಲಿಯಾದವರ ಸಂಖ್ಯೆ ಸೋಮವಾರ 70ಕ್ಕೆ ಏರಿಕೆಯಾಗಿದೆ.
Vijaya Karnataka Web Hyderabad


1908ರ ಬಳಿಕ ರಾಜ್ಯವು ಕಂಡ ಅತ್ಯಂತ ಭೀಕರ ಮಳೆಯಿಂದಾಗಿ ಹೈದರಾಬಾದ್‌ ಬಹುತೇಕ ಜಲಾವೃತವಾಗಿದ್ದು, ಮಳೆ ಸಂಬಂಧಿತ ಅವಘಡಗಳಲ್ಲಿ ಹೈದರಾಬಾದ್‌ ನಗರದಲ್ಲೇ 33 ಮಂದಿ ಬಲಿಯಾಗಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ 37 ಜನರು ಮೃತಪಟ್ಟಿದ್ದಾರೆ.

ತೆಲಂಗಾಣ ನೂರು ವರ್ಷದಲ್ಲಿ ಇಂತಹ ಭೀಕರ ಮಳೆ ಕಂಡಿರಲಿಲ್ಲ: ಕೆಸಿಆರ್‌ ಪರಿಹಾರ ಘೋಷಣೆ!
ಈ ಮಧ್ಯೆ, ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮತ್ತಷ್ಟು ಮಳೆಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವುದು ಜನರು ಮತ್ತು ಸರಕಾರದ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

ಮುಳುಗಿದ ಆಂಧ್ರ, ತೆಲಂಗಾಣ; ಭಾರಿ ಮಳೆಗೆ 20ಕ್ಕೂ ಹೆಚ್ಚು ಮಂದಿ ಸಾವು
ಪರಿಹಾರಕ್ಕಾಗಿ ‘ಮಹಾ’ಸಾಲ

ಭೀಕರ ಮಳೆ ಹಾಗೂ ನೆರೆಯಿಂದ ನಲುಗಿರುವ ಮಹಾರಾಷ್ಟ್ರವು ಪರಿಹಾರ ಕಾರ್ಯಕ್ಕಾಗಿ ಸಾಲ ಮಾಡಲು ನಿರ್ಧರಿಸಿದೆ. ಮೈತ್ರಿ ಸರಕಾರದ ಭಾಗವಾಗಿರುವ ಎನ್‌ಸಿಪಿ ವರಿಷ್ಠ ಶರದ್‌ ಪವಾರ್‌ ಸೋಮವಾರ ಈ ವಿಷಯ ತಿಳಿಸಿದ್ದಾರೆ.

"ರಾಜ್ಯವು ಇತಿಹಾಸದಲ್ಲೇ ಕಂಡು ಕೇಳರಿಯದಂತಹ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ಸಂತ್ರಸ್ತರಿಗೆ ಪರಿಹಾರ ನೀಡಲು ಸಾಲ ಮಾಡದೆ ವಿಧಿಯಲ್ಲ," ಎಂದು ಪವಾರ್‌ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ