ಆ್ಯಪ್ನಗರ

ಶ್ರೀಶೈಲಂ ಪವರ್‌ ಸ್ಟೇಷನ್ ಬೆಂಕಿ ಅವಘಡ: 7 ಮಂದಿ ಸಾವು, ಸಿಐಡಿ ತನಿಖೆಗೆ ಸಿಎಂ ಆದೇಶ!

ಬೆಂಕಿ ಆವರಿಸುತ್ತಿದ್ದಂತೆ ಟನಲ್‌ ಮೂಲಕ ಹನ್ನೊಂದು ಮಂದಿ ತಪ್ಪಿಸಿಕೊಂಡು ಹೊರಬಂದಿದ್ದರು. ಆದರೆ ಈ ಪೈಕಿ 9 ಮಂದಿ ಅಲ್ಲಿಯೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಅಸಿಸ್ಟೆಂಟ್‌ ಇಂಜಿನಿಯರ್‌ ಸೇರಿ ಒಟ್ಟು 7 ಮಂದಿಯ ಮೃತ ದೇಹವನ್ನ ಹೊರತೆಗೆಯಲಾಗಿದೆ. ಇನ್ನು ಇಬ್ಬರ ಮೃತ ದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ.

Vijaya Karnataka Web 21 Aug 2020, 5:59 pm
ತೆಲಂಗಾಣ: ಶ್ರೀಶೈಲಂ ಪವರ್‌ ಸ್ಟೇಷನ್‌ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಒಟ್ಟು 9 ಮಂದಿ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ. 9 ಮಂದಿಯ ಮೃತ ದೇಹವನ್ನ ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆದಿದ್ದಾರೆ. ನಿನ್ನೆ ತಡ ರಾತ್ರಿ ಶ್ರೀಶೈಲಂ ಪವರ್‌ ಸ್ಟೇಷನ್‌ನಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಒಟ್ಟು 20 ಮಂದಿ ಸಿಬ್ಬಂದಿಗಳು ಹಾಗೂ ಇಂಜಿನಿಯರ್‌ಗಳಿದ್ದರು ಸ್ಟೇಷನೊಳಗಿದ್ದರು.
Vijaya Karnataka Web 77674268


ಬೆಂಕಿ ಆವರಿಸುತ್ತಿದ್ದಂತೆ ಟನಲ್‌ ಮೂಲಕ ಹನ್ನೊಂದು ಮಂದಿ ಸಿಬ್ಬಂದಿಗಳು ತಪ್ಪಿಸಿಕೊಂಡು ಹೊರಬಂದಿದ್ದರು. ಆದರೆ ಈ ಪೈಕಿ 9 ಮಂದಿ ಅಲ್ಲಿಯೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಅಸಿಸ್ಟೆಂಟ್‌ ಇಂಜಿನಿಯರ್‌ ಸೇರಿ ಒಟ್ಟು 7 ಮಂದಿಯ ಮೃತ ದೇಹವನ್ನ ಹೊರತೆಗೆಯಲಾಗಿದೆ. ಇನ್ನು ಇಬ್ಬರ ಮೃತ ದೇಹಕ್ಕಾಗಿ ಕಾರ್ಯಾಚರಣೆ ಮುಂದುವರಿದಿದೆ.

ಘಟನಾ ಸ್ಥಳದಲ್ಲಿ ಮೂವತ್ತಕ್ಕೂ ಹೆಚ್ಚು ಅಗ್ನಿ ಶಾಮಕ ದಳ ಆಗಮಿಸಿದ್ದರು ಕೂಡ ಬೆಂಕಿ ನಂದಿಸಲು ಹರ ಸಾಹಸ ಪಡುವಂತಾಗಿತ್ತು. ಬೆಂಕಿ ಹೊತ್ತಿ ಉರಿಯುತ್ತಲೆ ಇತ್ತು. ಅಲ್ಲದೇ ಬೆಂಕಿಯಿಂದ ಹೊಗೆ ಸೃಷ್ಟಿಯಾಗಿದ್ದರಿಂದ ಕಾರ್ಯಾಚರಣೆಗೆ ಹಿನ್ನಡೆಯಾಗಿತ್ತು.

ತೆಲಂಗಾಣ: ಶ್ರೀಶೈಲಂ ಜಲ ವಿದ್ಯುತ್ ಕೇಂದ್ರದಲ್ಲಿ ಭೀಕರ ಬೆಂಕಿ ಅವಘಡ!

ಪ್ಯಾನೆಲ್‌ ಬೋರ್ಡ್‌ಗೆ ಬೆಂಕಿ!
ಇನ್ನು ಬೆಂಕಿ ಅವಘಡಕ್ಕೆ ಶಾರ್ಟ್‌ ಸರ್ಕ್ಯೂಟ್‌ ಮೂಲ ಕಾರಣ ಎಂದು ವಿದ್ಯುತ್‌ ಸ್ಥಾವರದ ಮೂಲಗಳ ತಿಳಿಸಿವೆ. ಪ್ಯಾನೆಲ್‌ ಬೋರ್ಡ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಆದರೆ ಈ ವರೆಗೆ ಘಟನೆಗೆ ಏನು ಕಾರಣ ಎಂದು ತಿಳಿದುಬಂದಿಲ್ಲ. ಹೀಗಾಗಿ ಸಿಎಂ ಚಂದ್ರಶೇಖರ್‌ ರಾವ್‌ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ