ಆ್ಯಪ್ನಗರ

7 ಜನರನ್ನು ಕೊಂದ ಪ್ರೇಮಿಗಳ ಕ್ಷಮಾ ಅರ್ಜಿ ತಿರಸ್ಕರಿಸಿದ ಪ್ರಣಬ್‌

7 ಜನರ ಕೊಂದ ಪ್ರೇಮಿಗಳ ಕ್ಷಮಾ ಅರ್ಜಿಯನ್ನು ರಾಷ್ಟ್ರಪತಿ ನಿರಾಕರಿಸಿದ್ದಾರೆ.

ಟೈಮ್ಸ್ ಆಫ್ ಇಂಡಿಯಾ 22 Aug 2016, 2:30 pm
ಅಮ್ರೋಹ್‌: ಕುಟುಂಬದ 7 ಮಂದಿಯನ್ನು ಕೊಂದ ಶಬನಂ ಹಾಗೂ ಆಕೆಯ ಪ್ರಿಯಕರ ಸಲೀಂ ಗಲ್ಲು ಶಿಕ್ಷೆಯಿಂದ ಪಾರಾಗಲು ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ಪ್ರಣಬ್‌ ಮುಖರ್ಜಿ ನಿರಾಕರಿಸಿದ್ದಾರೆ.
Vijaya Karnataka Web  president rejects mercy plea of lovers who killed seven
7 ಜನರನ್ನು ಕೊಂದ ಪ್ರೇಮಿಗಳ ಕ್ಷಮಾ ಅರ್ಜಿ ತಿರಸ್ಕರಿಸಿದ ಪ್ರಣಬ್‌


ಉತ್ತರ ಪ್ರದೇಶದ ರಾಜ್ಯಪಾಲ ರಾಮ್‌ ನಾಯಕ್‌ ಇವರ ಕ್ಷಮಾ ಅರ್ಜಿಯನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ತಿರಸ್ಕರಿಸಿದ್ದರು. ನಂತರ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿದ್ದರು.

ಅಮ್ರೋಹ್‌ನ ನಿವಾಸದಲ್ಲಿ 10 ತಿಂಗಳ ಮಗು ಸೇರಿದಂತೆ ಕುಟುಂಬದ 7 ಮಂದಿಯನ್ನು ಇಬ್ಬರು ಕೊಲೆ ಮಾಡಿದ್ದರು. ಪ್ರೀತಿಗೆ ವಿರೋಧ ಪಡಿಸಿದ್ದೇ ಕೊಲೆಗೆ ಕಾರಣ. ಅರ್ಜಿ ಸುಪ್ರೀಂಕೋರ್ಟ್‌ನಲ್ಲಿದ್ದು ಈಗಲೇ ಇಬ್ಬರನ್ನೂ ಗಲ್ಲಿಗೇರಿಸಲಾಗದು ಎಂದು ತಪ್ಪಿಸ್ಥರ ಪರ ವಾದ ಮಂಡಿಸಿರುವ ವಕೀಲರು ಹೇಳಿದ್ದಾರೆ.

ಕೊಲೆ ಮಾಡಿದ ಸಂದರ್ಭದಲ್ಲಿ ಗರ್ಭಿಣಿಯಾಗಿದ್ದ ಶಬನಂ, ನಿರುದ್ಯೋಗಿ ಪ್ರೇಮಿ ಸಲೀಂ ಜತೆ ಸಂಚು ರೂಪಿಸಿ ಮನೆವಯರಿಗೆ ಚಹಾದಲ್ಲಿ ಮತ್ತು ಬರಿಸುವ ಔಷಧ ಬೆರೆಸಿದ್ದಳು. ನಂತರ ಮನೆಗೆ ಬಂದ ಸಲೀಂ ಎಳು ಮಂದಿಯ ಕುತ್ತಿಗೆ ಸೀಳಿದ್ದ.

ಶಬನಂ, ಸಲೀಂಗೆ ಸಣ್ಣ ಮಗುವಿದೆ. ಇಬ್ಬರಿಗೂ ಗಲ್ಲಾದರೆ ಮಗು ಅನಾಥವಾಗುವುದು ಎಂದು ಪ್ರಕರಣದ ಅಮಿಕಸ್‌ ಕ್ಯೂರಿ ದುಷ್ಯಂತ್‌ ಪರಾಶರ್‌ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಕೋರ್ಟ್‌ ತಳ್ಳಿ ಹಾಕಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ