ಆ್ಯಪ್ನಗರ

ಜಾಮಿಯಾ ಮಿಲಿಯಾ ಘಟನೆ ಸಂಬಂಧ ಯಾವುದೇ ವಿದ್ಯಾರ್ಥಿಯನ್ನು ಬಂಧಿಸಿಲ್ಲ: ದಿಲ್ಲಿ ಪೊಲೀಸ್

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಜಾಮಿಯಾ ಮಿಲಿಯಾ ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ದಿಲ್ಲಿ ಪೊಲೀಸರು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು ಎನ್ನಲಾಗಿತ್ತು. ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

Vijaya Karnataka Web 17 Dec 2019, 10:29 am
ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಿದ್ದ ಹೊಸದಿಲ್ಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾನಿಲಯದ ಯಾವುದೇ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ. 10 ಮಂದಿ ಅಪರಾಧ ಹಿನ್ನೆಲೆಯುಳ್ಳವರನ್ನು ಬಂಧಿಸಿದ್ದೇವೆ ಎಂದು ದಿಲ್ಲಿ ಪೊಲೀಸ್‌ ಹೇಳಿದ್ದಾರೆ.
Vijaya Karnataka Web delhi police 12 toi


ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್‌ಆರ್‌ಸಿ ವಿರೋಧಿಸಿ ಭಾರಿ ಪ್ರತಿಭಟನೆಗಳು ನಡೆಯುತ್ತಿವೆ. ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ವಿದ್ಯಾರ್ಥಿಗಳು ಸಹ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ದಿಲ್ಲಿ ಪೊಲೀಸರು ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿವಿ ಕ್ಯಾಂಪಸ್‌ನಲ್ಲಿ ಪೊಲೀಸ್‌ ಕಾರ್ಯಾಚರಣೆ ನಡೆಸಿದ್ದರು ಹಾಗೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ, ಹಲವು ವಿದ್ಯಾರ್ಥಿಗಳನ್ನು ಬಂಧಿಸಲಾಗಿತ್ತು ಎಂದು ಸಹ ಹೇಳಲಾಗಿದೆ. ಈ ಸಂಬಂಧ ದಿಲ್ಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಡಿಸೆಂಬರ್ 15 ರ ಜಾಮಿಯಾ ಮಿಲಿಯಾ ಇಸ್ಲಾಮಿಯಾ ಹಿಂಸಾಚಾರ ಘಟನೆ ಸಂಬಂಧ ಕ್ರಿಮಿನಲ್‌ ಹಿನ್ನೆಲೆಯುಳ್ಳ 10 ಮಂದಿಯನ್ನು ಬಂಧಿಸಲಾಗಿದೆ. ಆದರೆ, ಯಾವುದೇ ವಿದ್ಯಾರ್ಥಿಯನ್ನು ಬಂಧಿಸಿಲ್ಲ ಎಂದು ದಿಲ್ಲಿ ಪೊಲೀಸರು ಮಂಗಳವಾರ ಮಾಹಿತಿ ನೀಡಿದ್ದಾರೆ.

ಪೌರತ್ವ ಮಸೂದೆ: ಗೋಲಿಬಾರ್‌ ಆದೇಶಕ್ಕೂ ಜಗ್ಗದ ಜನ, ಯುದ್ಧ ಭೂಮಿಯಾದ ಅಸ್ಸಾಂ


ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾನಿಲಯದಲ್ಲಿ ಪೊಲೀಸ್‌ ಕಾರ್ಯಾಚರಣೆ ವಿರೋಧಿಸಿ ಹಲವರು ಪ್ರತಿಭಟನೆ ನಡೆಸುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ವಿದ್ಯಾರ್ಥಿಗಳ ವಿರುದ್ಧದ ಪೊಲೀಸ್‌ ಕಾರ್ಯಾಚರಣೆ ಖಂಡಿಸಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸಹ ಸೋಮವಾರ ದಿಲ್ಲಿಯ ಇಂಡಿಯಾ ಗೇಟ್‌ ಬಳಿ ಧರಣಿ ನಡೆಸಿದ್ದರು.

'ಕ್ಷಮೆ ಕೇಳಲು ನಾನು ರಾಹುಲ್‌ ಸಾವರ್ಕರ್‌ ಅಲ್ಲ, ರಾಹುಲ್‌ ಗಾಂಧಿ'; ಬಿಜೆಪಿಗರಿಗೆ ತಿರುಗೇಟು

ಈ ವೇಳೆ ಮಾತನಾಡಿದ ಪ್ರಿಯಾಂಕಾ ವಾದ್ರಾ, ಪೌರತ್ವ ಕಾನೂನು ತಾರತಮ್ಯದಿಂದ ಕೂಡಿದೆ. ಅದನ್ನು ವಿರೋಧಿಸುವ ಹಕ್ಕು ಎಲ್ಲ ನಾಗರಿಕರಿಗೂ ಇದೆ. ಆದರೆ, ಬಲವಂತದಿಂದ ಬಾಯಿ ಮುಚ್ಚಿಸುವ ಕೆಲಸವನ್ನು ಕೇಂದ್ರ ಸರಕಾರ ಮಾಡುತ್ತಿದೆ. ಯುವ ಸಮುದಾಯ ಈ ದೇಶದ ಆತ್ಮ. ಅಂತಹ ಆತ್ಮದ ಮೇಲೆ ಈಗ ದಾಳಿ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ದೇಶಾದ್ಯಂತ ಹಲವು ವಿದ್ಯಾರ್ಥಿಗಳು ಸೇರಿದಂತೆ ಯುವ ಸಮುದಾಯ ಹಾಗೂ ವಿಪಕ್ಷಗಳು ಸಹ ಪೌರತ್ವ ತಿದ್ದುಪಡಿ ಕಾಯ್ದೆ, ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ: ಮೋದಿ-ಶಾ ವಿರುದ್ಧ 10 ಗಂಭೀರ ಆರೋಪ!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ