ಆ್ಯಪ್ನಗರ

4 ಗಂಟೆ.. 100 ಪ್ರಶ್ನೆ.. ಬಾಬರಿ ಮಸೀದಿ ಪ್ರಕರಣದಲ್ಲಿ ಹೇಳಿಕೆ ದಾಖಲಿಸಿದ ಎಲ್‌.ಕೆ.ಅಡ್ವಾಣಿ

1992ರ ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಟ ಅಡ್ವಾಣಿ ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯದಿಂದ ಸುದೀರ್ಘ ವಿಚಾರಣೆ ಎದುರಿಸಿದ್ದಾರೆ. ಬರೋಬ್ಬರಿ 4.5 ಗಂಟೆಗಳ ಕಾಲ ವಿಚಾರಣೆಯಲ್ಲಿ ನೂರಕ್ಕೂ ಹೆಚ್ಚು ಪ್ರಶ್ನೆಗಳನ್ನು ಅಡ್ವಾಣಿ ಅವರಿಗೆ ಕೇಳಲಾಗಿದೆ.

Agencies 24 Jul 2020, 7:45 pm
ಲಖನೌ (ಉತ್ತರ ಪ್ರದೇಶ): 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಅವರನ್ನು ಶುಕ್ರವಾರ ಸಿಬಿಐ ವಿಶೇಷ ನ್ಯಾಯಾಲಯ ಸುಮಾರು 4.5 ಗಂಟೆಗಳ ವಿಚಾರಣೆ ನಡೆಸಿದ್ದು, ನೂರಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಗಿದೆ.
Vijaya Karnataka Web 100 questions over 4 hours lk advani deposes in babri maszid case
4 ಗಂಟೆ.. 100 ಪ್ರಶ್ನೆ.. ಬಾಬರಿ ಮಸೀದಿ ಪ್ರಕರಣದಲ್ಲಿ ಹೇಳಿಕೆ ದಾಖಲಿಸಿದ ಎಲ್‌.ಕೆ.ಅಡ್ವಾಣಿ


ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದ 92 ವರ್ಷದ ಎಲ್‌.ಕೆ.ಅಡ್ವಾಣಿ, ತಮ್ಮ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3.30ರವರೆಗೆ ವಿಚಾರಣೆ ನಡೆಸಲಾಗಿದೆ.

ವಿಚಾರಣೆಯ ಅವಧಿಯಲ್ಲಿ ಸುಮಾರು 100 ಪ್ರಶ್ನೆಗಳನ್ನು ಲಾಲ್‌ ಕೃಷ್ಣ ಅಡ್ವಾಣಿ ಅವರಿಗೆ ಸಿಬಿಐ ವಿಶೇಷ ಕೋರ್ಟ್‌ ಕೇಳಿದೆ ಎಂದು ಅಡ್ವಾಣಿ ಪರ ವಕೀಲರು ಹೇಳಿದ್ದಾರೆ. ಇನ್ನು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಬುಧವಾರ ಎಲ್‌.ಕೆ.ಅಡ್ವಾಣಿ ಅವರನ್ನು ಭೇಟಿಯಾಗಿ ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆಸಿದ್ದರು.

ರಾಮಲಲ್ಲಾನಿಗೆ ನಿರ್ಮಾಣವಾಗುವ ಭಾರಿ ಮಂದಿರ ಹೇಗಿರುತ್ತದೆ? ಹೇಗೆ ನಡೆಯಲಿದೆ ಭೂಮಿ ಪೂಜೆ?

ಆಗಸ್ಟ್‌ 31ರ ಒಳಗೆ 1992ರ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ವಿಚಾರಣೆಯನ್ನು ಮುಗಿಸಿ, ತೀರ್ಪು ನೀಡುವ ಸಲುವಾಗಿ ದೈನಂದಿನ ವಿಚಾರಣೆಯನ್ನು ನಡೆಸುತ್ತಿದೆ. ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿದ್ದು, ಅದಕ್ಕೂ ಮುಂಚೆ ಈ ಪ್ರಕರಣದ ವಿಚಾರಣೆ ನಡೆಯುತ್ತಿರುವುದು ಕುತೂಹಲ ಮೂಡಿಸಿದೆ.

ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಘ್ನ; ಭೂಮಿ ಪೂಜೆಗೆ ತಡೆ ಕೋರಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ

ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕರಾದ ಎಲ್‌.ಕೆ.ಅಡ್ವಾಣಿ, ಮುರುಳಿ ಮನೋಹರ್‌ ಜೋಷಿ ಮತ್ತು ಉಮಾ ಭಾರತಿ ಸೇರಿ ಅನೇಕರ ಮೇಲೆ ಮಸೀದಿ ಧ್ವಂಸದ ಆರೋಪ ಕೇಳಿಬಂದಿದೆ. ಗುರುವಾರ ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಿದ್ದ ಮುರಳಿ ಮನೋಹರ್‌ ಜೋಷಿ ಪ್ರಶ್ನೆಗಳಿಗೆ ಉತ್ತರಿಸಿದ್ದರು.

ಬಾಬ್ರಿ ಮಸೀದಿ ಧ್ವಂಸ ಪ್ರಕರಣ, ಕೋರ್ಟ್‌ಗೆ ಹೇಳಿಕೆ ನೀಡಿದ ಮುರಳಿ ಮನೋಹರ್‌‌ ಜೋಶಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ