ಆ್ಯಪ್ನಗರ

ಮುಂಬಯಿನಲ್ಲಿ ಮತ್ತೆ ಮಳೆ: ಜನ ಜೀವನ ಅಸ್ತವ್ಯಸ್ತ

ವಿಮಾನ ಸೇವೆಯಲ್ಲೂ ವ್ಯತ್ಯಯವಾಗಿದೆ. 11 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. 3 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ.

PTI 9 Jul 2019, 5:00 am
ಮುಂಬಯಿ: ದೇಶದ ವಾಣಿಜ್ಯ ನಗರಿ ಮುಂಬಯಿನಲ್ಲಿ ಸೋಮವಾರ ನಸುಕಿನಿಂದ ಮತ್ತೆ ಮಳೆ ಸುರಿಯಲಾರಂಭಿಸಿದ್ದುಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು ಹಾಗೂ ಲೋಕಲ್‌ ರೈಲು ಹಳಿ ಮಾರ್ಗಗಳು ಜಲಾವೃತಗೊಂಡಿದ್ದು, ಸಕಾಲಕ್ಕೆ ಬಸ್‌ ಹಾಗೂ ರೈಲು ಸೇವೆ ದೊರೆಯದೇ ಜನರು ಪರದಾಡಿದರು. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದರಿಂದ ನಿವಾಸಿಗಳು ತೀವ್ರ ತರದ ಸಮಸ್ಯೆಗಳನ್ನು ಎದುರಿಸಿದರು. ನದಿಯಂತಾದ ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿದ್ದ ದೃಶ್ಯಗಳು ಸಾಮಾನ್ಯವಾಗಿದ್ದವು.
Vijaya Karnataka Web rain


ವಿಮಾನ ಸೇವೆಯಲ್ಲೂ ವ್ಯತ್ಯಯವಾಗಿದೆ. 11 ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. 3 ವಿಮಾನಗಳ ಮಾರ್ಗ ಬದಲಿಸಲಾಗಿದೆ ಎಂದು ಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಹೇಳಿದ್ದಾರೆ. ಅಂಧೇರಿಯಲ್ಲಿ ಕಾರ್ಖಾನೆಯೊಂದರ ಗೋಡೆ ಕುಸಿದು 5 ಜನರಿಗೆ ಗಾಯಗಳಾಗಿರುವುದು ವರದಿಯಾಗಿದೆ. ಸಾಂತಾಕ್ರೂಜ್‌ನಲ್ಲಿ ಆರು ಗಂಟೆಯಲ್ಲಿ 122 ಮಿ.ಮೀ. ಮಳೆ ಬಿದ್ದಿದೆ.

ಭಾರಿ ಮಳೆ ಮನ್ಸೂಚನೆ: ಮುಂಬಯಿ ಹಾಗೂ ಸುತ್ತಮುತ್ತ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ 'ರೆಡ್‌ ಅಲರ್ಟ್‌' ವಾರ್ನಿಂಗ್‌ ನೀಡಿದೆ. ಒಂದೇ ದಿನ 200 ಮಿ.ಮೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ರವಾನಿಸಿದೆ.

ತಂಡಗಳ ರಚನೆ: ಸಾಕಷ್ಟು ಸ್ವಯಂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಬೃಹನ್ಮುಂಬಯಿ ಮಹಾನಗರ ಪಾಲಿಕೆ ಹಾಗೂ ಪೊಲೀಸ್‌ ಇಲಾಖೆ ಮಾಧ್ಯಮಗಳ ಮೂಲಕ ಜನತೆಯನ್ನು ಕೋರಿಕೊಂಡಿದೆ. ಪಾಲಿಕೆಯು ತುರ್ತು ಸ್ಥಿತಿ ಎದುರಿಸಲು ನುರಿತ ಸಿಬ್ಬಂದಿಗಳ ವಲಯವಾರು ತಂಡಗಳನ್ನು ರಚಿಸಿದ್ದು, ಜನರ ದೂರುಗಳಿಗೆ ಸ್ಪಂದಿಸುವಂತೆ ಸೂಚಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ