ಆ್ಯಪ್ನಗರ

ನಕ್ಸಲರಿಂದ ಐಇಡಿ ಸ್ಪೋಟ: 11 CRPF ಯೋಧರಿಗೆ ಗಾಯ

ಘಟನೆಯಲ್ಲಿ 11 ಯೋಧರು ಗಾಯಗೊಂಡಿದ್ದು, ರಾಜ್ಯ ರಾಜಧಾನಿ ರಾಂಚಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TIMESOFINDIA.COM 28 May 2019, 1:50 pm
ಹೊಸದಿಲ್ಲಿ: ಜಾರ್ಖಂಡ್‌ನ ಸಾರೈಕೆಲ್ಲಾದ ಕುಚಿ ಪ್ರದೇಶದಲ್ಲಿ ನಕ್ಸಲರು ಐಇಡಿ ಸ್ಪೋಟಿಸಿದ್ದು, ಸಿಆರ್‌ಪಿಎಫ್‌ನ 11 ಜನ ಯೋಧರು ಗಂಭೀರ ಗಾಯಗೊಂಡಿದ್ದಾರೆ.

ಮಂಗಳವಾರ ಬೆಳಗಿನ ಜಾವ ಸಿಆರ್‌ಪಿಎಫ್‌ನ ವಿಶೇಷ್ ಜಂಗಲ್ ವಾರ್‌ಫೆರ್ ಘಟಕ, ಕೋಬ್ರಾ ಮತ್ತು ರಾಜ್ಯ ಪೊಲೀಸ್ ಘಟಕದ ಅಧಿಕಾರಿಗಳು ಕುಚಿ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ನಕ್ಸಲರು ಬಾಂಬ್ ಸ್ಪೋಟಿಸಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ 11 ಯೋಧರು ಗಾಯಗೊಂಡಿದ್ದು, ಏರ್ ಲಿಫ್ಟ್ ಮೂಲಕ ರಾಜ್ಯ ರಾಜಧಾನಿ ರಾಂಚಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ