ಆ್ಯಪ್ನಗರ

ಗುಜರಾತ್‌: ಜವರಾಯನ ಅಟ್ಟಹಾಸಕ್ಕೆ 13 ಮಂದಿ ಬಲಿ, ರಸ್ತೆ ಬದಿಯಲ್ಲಿ ಮಲಗಿದ್ದವರ ಮೇಲೆ ಹರಿದ ಲಾರಿ!

​​ರಸ್ತೆ ಬದಿಯಲ್ಲಿ ಮಲಗಿದ್ದ 13 ಕಾರ್ಮಿಕರ ಮೇಲೆ ಟ್ರಕ್‌ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಇನ್ನು ಕೆಲವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲ ರಾಜಸ್ಥಾನ ಮೂಲದವರಾಗಿದ್ದು ಕೆಲಸದ ಹಿನ್ನೆಲೆ ಗುಜರಾತ್‌ಗೆ ಬಂದಿದ್ದರು ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ.

Vijaya Karnataka Web 19 Jan 2021, 9:04 am
ಗುಜರಾತ್‌: ಮುಂಜಾನೆಯ ತಣ್ಣಗಿನ ಶೀತ ಗಾಳಿಯಿಂದಾಗಿ ಗಾಢ ನಿದ್ರೆ ಆವರಿಸಿತ್ತು. ಇನ್ನೇನೊ ಸ್ವಲ್ಪ ಸಮಯದಲ್ಲಿ ಎದ್ದು ತಮ್ಮ ತಮ್ಮ ಕೆಲಸಕ್ಕೆ ತೊಡಗಬೇಕಿತ್ತು. ಆದರೆ ಜವರಾಯನ ರೂಪದಲ್ಲಿ ಬಂದ ಲಾರಿಯೊಂದು ರಸ್ತೆ ಬದಿಯಲ್ಲಿ ಮಲಗಿದ್ದ 13 ಮಂದಿ ಕಾರ್ಮಿಕರ ಪ್ರಾಣವನ್ನೇ ಕಿತ್ತುಕೊಂಡಿದೆ ಈ ಹೃದಯವಿದ್ರಾವಕ ಘಟನೆ ಗುಜರಾತ್‌ನ ಸೂರತ್‌ ಜಿಲ್ಲೆಯ ಕೊಸಾಂಬಾದಲ್ಲಿ ನಡೆದಿದೆ.
Vijaya Karnataka Web EsEGgCfUcAIlOaN


ರಸ್ತೆ ಬದಿಯಲ್ಲಿ ಮಲಗಿದ್ದ 13 ಕಾರ್ಮಿಕರ ಮೇಲೆ ಟ್ರಕ್‌ ಹರಿದು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಘಟನೆಯಲ್ಲಿ ಇನ್ನು ಕೆಲವರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲ ರಾಜಸ್ಥಾನ ಮೂಲದವರಾಗಿದ್ದು ಕೆಲಸದ ಹಿನ್ನೆಲೆ ಗುಜರಾತ್‌ಗೆ ಬಂದಿದ್ದರು ಎಂದು ಗುಜರಾತ್‌ ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಹಿಟ್‌ ಅಂಡ್‌ ರನ್‌ ಕೇಸ್‌ ದಾಖಲಾಗಿದೆ.


ಪ್ರಧಾನಿ ನರೇಂದ್ರ ಮೋದಿ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. "ಸೂರತ್‌ನಲ್ಲಿ ನಡೆದ ಟ್ರಕ್ ಅಪಘಾತದಿಂದ ಸಂಭವಿಸಿದ ಪ್ರಾಣಹಾನಿ ನಿಜಕ್ಕೂ ದುರಂತ ಘಟನೆಯಾಗಿದೆ. ದುಃಖಿತ ಕುಟುಂಬಗಳೊಂದಿಗೆ ನನ್ನ ನೋವುಗಳು ಇರಲಿದೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ" ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

3 ದಿನದಲ್ಲಿ ಕೊರೊನಾ ಲಸಿಕೆ ಪಡೆದ 580 ಜನರಿಗೆ ಅಡ್ಡ ಪರಿಣಾಮ, ಕರ್ನಾಟಕದ ಇಬ್ಬರು ಆಸ್ಪತ್ರೆಗೆ ದಾಖಲು!

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ