ಆ್ಯಪ್ನಗರ

ಮಹಾರಾಷ್ಟ್ರ ದಿನದಂದೇ ಮಾವೋವಾದಿಗಳ ಅಟ್ಟಹಾಸ: 15 ಭದ್ರತಾ ಸಿಬ್ಬಂದಿ ಹುತಾತ್ಮ

ಉತ್ತರ ಗಡ್ಚಿರೋಲಿಯ ಕುರ್ಖೇಡಾದಿಂದ ಸುಮಾರು 6 ಕಿ.ಮೀ ದೂರದಲ್ಲಿರುವ ಲೆಂಧ್ರಿ ಪೂಲ್‌ನಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ.

TIMESOFINDIA.COM 1 May 2019, 3:23 pm
ಹೊಸದಿಲ್ಲಿ: ಮಹಾರಾಷ್ಟ್ರ ದಿನದಂದೇ ಮಾವೋವಾದಿಗಳು ಇಲ್ಲಿನ ಗಡ್ಚಿರೋಲಿಯಲ್ಲಿ ಐಇಡಿ ಬಾಂಬ್ ಸ್ಫೋಟಿಸಿದ್ದು, ಸುಮಾರು 15 ಭದ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಗಡ್ಚಿರೋಲಿಯ ಕುರ್ಖೇಡಾದಿಂದ ಸುಮಾರು 6 ಕಿ.ಮೀ ದೂರದಲ್ಲಿರುವ ಲೆಂಧ್ರಿ ಪೂಲ್‌ನಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ದಾಳಿಲ್ಲಿ ಭದ್ರತಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕ ಕೂಡ ಸಾವನ್ನಪ್ಪಿದ್ದಾನೆ.

24 ಗಂಟೆಯಲ್ಲಿ ಎರಡನೇ ಬಾರಿ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದಾರೆ. ಅಷ್ಟೆ ಅಲ್ಲದೆ, ಕಳೆದ 18 ದಿನಗಳಲ್ಲಿ 25ಕ್ಕೂ ಅಧಿಕ ಜನರ ಪ್ರಾಣ ಬಲಿ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇದಕ್ಕೂ ಮುನ್ನ, ಕುರ್ಖೇಡಾ ಉಪ ಜಿಲ್ಲೆಯ ಖಾಸಗಿ ಗುತ್ತಿಗೆದಾರರೊಬ್ಬರಿಗೆ ಸೇರಿದ್ದ ಸುಮಾರು ಮೂರು ಡಜನ್ ವಾಹನಗಳನ್ನು ಮಾವೋವಾದಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಗಾಹುತಿಯಾಗಿರುವ ಬಹುತೇಕ ವಾಹನಗಳು ಅಮರ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್‌ಗೆ ಸೇರಿದ್ದು, ದಾದಾಪುರ ಗ್ರಾಮದ ಸಮೀಪದಲ್ಲಿರುವ ಎನ್‌ಎಚ್ 136 ಬಳಿಯ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದವು ಎಂದು ತಿಳಿದು ಬಂದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ