ಆ್ಯಪ್ನಗರ

ಇಬ್ಬರು ಹಿಜ್ಬುಲ್‌ ಉಗ್ರರು ಹತ

ಮೃತ ಉಗ್ರರನ್ನು ಗುಲ್ಶನ್‌ಪೊರ ನಿವಾಸಿ ಅದ್ಫಾರ್‌ ಫಯಾಜ್‌ ಪರಾಯ್‌ ಮತ್ತು ಷರೀಫಾಬಾದ್‌ ನಿವಾಸಿ ಇರ್ಫಾನ್‌ ಅಹ್ಮದ್‌ ರಾಥರ್‌ ಎಂದು ಗುರುತಿಸಲಾಗಿದೆ.

Vijaya Karnataka 6 Mar 2019, 5:00 am
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ಬೇಟೆ ಮುಂದುವರಿದಿದ್ದು, ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಸುಮಾರು 12 ತಾಸುಗಳ ಎನ್‌ಕೌಂಟರ್‌ನಲ್ಲಿ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಹೊಡೆರುಳಿಸುವಲ್ಲಿ ಸೇನೆ ಯಶಸ್ವಿಯಾಗಿದೆ.
Vijaya Karnataka Web 2-2-05032-PTI3_5_2019_000147A


ಮೃತ ಉಗ್ರರನ್ನು ಗುಲ್ಶನ್‌ಪೊರ ನಿವಾಸಿ ಅದ್ಫಾರ್‌ ಫಯಾಜ್‌ ಪರಾಯ್‌ ಮತ್ತು ಷರೀಫಾಬಾದ್‌ ನಿವಾಸಿ ಇರ್ಫಾನ್‌ ಅಹ್ಮದ್‌ ರಾಥರ್‌ ಎಂದು ಗುರುತಿಸಲಾಗಿದೆ.

ಮೃತರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪುಲ್ವಾಮಾ ಜಿಲ್ಲೆಯ ತ್ರಾಲ್‌ನ ರೇಶಿ ಮೊಹಲ್ಲಾ ಪ್ರದೇಶದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನಾಪಡೆ ಸೋಮವಾರ ರಾತ್ರಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಯೋಧರನ್ನು ನೋಡುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಸೇನಾಪಡೆಗಳೂ ಕೂಡ ಪ್ರತಿದಾಳಿ ನಡೆಸಿದ್ದು, ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಘಟನೆಯಲ್ಲಿ ಫಾರೂಕ್‌ ಅಹ್ಮದ್‌ ಮಲಿಕ್‌ ಎಂಬ ನಾಗರಿಕರೊಬ್ಬರಿಗೂ ಗುಂಡು ತಗುಲಿ ಗಾಯಗೊಂಡಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ