ಆ್ಯಪ್ನಗರ

ಪೊಲೀಸರ ಗುಂಡಿಗೆ ಇಬ್ಬರು ರೈತರು ಬಲಿ

ಮಧ್ಯಪ್ರದೇಶದಲ್ಲಿ ಬೆಳೆಗೆ ಹೆಚ್ಚಿನ ಬೆಲೆ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಫೈರಿಂಗ್‌ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.

ವಿಕ ಸುದ್ದಿಲೋಕ 6 Jun 2017, 4:28 pm
ಇಂದೋರ್‌: ಮಧ್ಯಪ್ರದೇಶದಲ್ಲಿ ಬೆಳೆಗೆ ಹೆಚ್ಚಿನ ಬೆಲೆ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಗಲಭೆ ನಿಯಂತ್ರಿಸಲು ಪೊಲೀಸರು ನಡೆಸಿದ ಫೈರಿಂಗ್‌ಗೆ ಇಬ್ಬರು ರೈತರು ಬಲಿಯಾಗಿದ್ದಾರೆ.
Vijaya Karnataka Web 2 killed in police firing at farmers protest in madhya pradesh
ಪೊಲೀಸರ ಗುಂಡಿಗೆ ಇಬ್ಬರು ರೈತರು ಬಲಿ


ಮಾಂಡ್‌ಸರ್‌ ಜಿಲ್ಲೆಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಪ್ರತಿಭಟನಾ ನಿರತ ರೈತರು ಉದ್ರಿಕ್ತರಾಗಿ ಹತ್ತು ಟ್ರಕ್‌, ತುರ್ತು ವಾಹನ ಮತ್ತು ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ರೈತರನ್ನು ನಿಯಂತ್ರಿಸಲು ಸಿಆರ್‌ಪಿಎಫ್‌ ಸಿಬ್ಬಂದಿ ಮತ್ತು ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಈ ವೇಳೆ ಮೂವರು ರೈತರು ಗಾಯಗೊಂಡಿದ್ದಾರೆ.

ಸುವಸರಾ ಪ್ರದೇಶದಲ್ಲಿ ರೈತರು ಪೊಲೀಸ್‌ ವಾಹನ ಸೇರಿದಂತೆ ಸಾರ್ವಜನಿಕ ಆಸ್ತಿ ಧ್ವಂಸಗೊಳಿಸಲು ಮುಂದಾದಾಗ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ. ದಲೊಡಾ ಪ್ರದೇಶದಲ್ಲಿ ರೈತರು ರೈಲ್ವೆ ಹಳಿಗಳನ್ನು ಹಾನಿಗೊಳಿಸಿದ್ದಾರೆ. ಲಕೆಲವೆಡೆ ಪೊಲೀಸರತ್ತ ಕಲ್ಲು ತೂರಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಮಾಂಡ್‌ಸರ್‌ನಪಿಪ್ಲಿಯಾ ಮಾಂಡಿಯಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ