ಆ್ಯಪ್ನಗರ

ಛತ್ತೀಸಗಡದ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್‌ಗೆ ಬೆಂಕಿ: ಇಬ್ಬರು ಪೈಲಟ್‌ಗಳು ಸಾವು

ಗುರುವಾರ ರಾತ್ರಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಛತ್ತೀಸಗಡದ ರಾಯಪುರ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ರಾತ್ರಿ 9.10ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Edited byಅಮಿತ್ ಎಂ.ಎಸ್ | Vijaya Karnataka Web 13 May 2022, 12:34 pm

ಹೈಲೈಟ್ಸ್‌:

  • ಛತ್ತೀಸಗಡದ ರಾಯಪುರ ವಿಮಾನ ನಿಲ್ದಾಣದಲ್ಲಿ ಅಪಘಾತ
  • ಬೆಂಕಿ ಹೊತ್ತಿಕೊಂಡು ಅಪಘಾತಕ್ಕೀಡಾದ ಹೆಲಿಕಾಪ್ಟರ್
  • ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರೂ ಪೈಲಟ್‌ಗಳು ಮರಣ
  • ಅಪಘಾತದ ಕಾರಣ ಪತ್ತೆಗೆ ತಾಂತ್ರಿಕ ತನಿಖೆ ಆರಂಭ

ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web 2 pilots died in a helicopter crash at chhattisgarhs raipur airport
ಛತ್ತೀಸಗಡದ ವಿಮಾನ ನಿಲ್ದಾಣದಲ್ಲಿ ಹೆಲಿಕಾಪ್ಟರ್‌ಗೆ ಬೆಂಕಿ: ಇಬ್ಬರು ಪೈಲಟ್‌ಗಳು ಸಾವು
ರಾಯ್ಪುರ: ಛತ್ತೀಸಗಡದ ರಾಯಪುರದಲ್ಲಿ ಗುರುವಾರ ಸಂಜೆ ವಿಮಾನ ನಿಲ್ದಾಣವೊಂದರಲ್ಲಿ ಹೆಲಿಕಾಪ್ಟರ್ ಅಪಘಾತಗೊಂಡಿದ್ದು, ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಕ್ಯಾಪ್ಟನ್ ಗೋಪಾಲ್ ಕೃಷ್ಣ ಪಂಡಾ ಮತ್ತು ಕ್ಯಾಪ್ಟನ್ ಎಪಿ ಶ್ರೀವಾಸ್ತವ ಜೀವ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೈಲಟ್‌ಗಳು ಹೆಲಿಕಾಪ್ಟರ್ ಲ್ಯಾಂಡ್ ಮಾಡುವ ಸಂದರ್ಭದಲ್ಲಿ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡಿದೆ. ಒಳಗೆ ಇದ್ದ ಇಬ್ಬರೂ ಪೈಲಟ್‌ಗಳು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ. ಇದು ಛತ್ತೀಸಗಡ ಸರ್ಕಾರಕ್ಕೆ ಸೇರಿದ ಹೆಲಿಕಾಪ್ಟರ್ ಆಗಿದೆ.
ಎಣ್ಣೆ ಮತ್ತಲ್ಲಿ ವಿಮಾನ ಚಾಲನೆ : ಒಂಬತ್ತು ಪೈಲಟ್‌ ಗಳು ಅಮಾನತು

ರಾಯಪುರದಲ್ಲಿನ ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣದಲ್ಲಿ ಹಾರಾಟ ಅಭ್ಯಾಸದ ವೇಳೆ ಈ ಘಟನೆ ನಡೆದಿದೆ. ಮನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 9.10ರ ಸುಮಾರಿಗೆ ಹೆಲಿಕಾಪ್ಟರ್‌ಗೆ ಬೆಂಕಿ ಹೊತ್ತಿಕೊಂಡು ಅವಘಡ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಪ್ರಶಾಂತ್ ಅಗ್ರವಾಲ್ ತಿಳಿಸಿದ್ದಾರೆ.

ಹೆಲಿಕಾಪ್ಟರ್ ಅಪಘಾತಕ್ಕೆ ನಿಖರ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ಛತ್ತೀಸಗಡ ಸರ್ಕಾರದ ಪರವಾಗಿ ವಿವರವಾದ ತಾಂತ್ರಿಕ ತನಿಖೆ ನಡೆಯಲಿದ್ದು, ಅಪಘಾತಕ್ಕೆ ನಿರ್ದಿಷ್ಟ ಕಾರಣ ಪತ್ತೆ ಪ್ರಯತ್ನ ನಡೆಯಲಿದೆ.
ಸಂಬಳ ವಿಚಾರದಲ್ಲಿ ಅಶ್ಲೀಲ ಪದಗಳಿಂದ ನಿಂದನೆ!: ಸಿಕ್ಕಿಬಿದ್ದ 7 ಇಂಡಿಗೋ ಪೈಲಟ್‌ಗಳು

ಈ ದುರಂತದ ಬಗ್ಗೆ ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಾಘೆಲ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಪೈಲಟ್‌ಗಳ ಕುರಿತು ಅವರು ಶೋಕ ಸಂದೇಶ ನೀಡಿದ್ದಾರೆ. "ರಾಯಪುರ ವಿಮಾನ ನಿಲ್ದಾಣದಲ್ಲಿ ರಾಜ್ಯ ಹೆಲಿಕಾಪ್ಟರ್ ಅಪಘಾತಕ್ಕೀಡಾದ ದುಃಖಕರ ಸುದ್ದಿಯನ್ನು ಈಗಷ್ಟೇ ತಿಳಿದೆ. ಈ ದುರಂತಮಯ ಅಪಘಾತದಲ್ಲಿ ನಮ್ಮ ಇಬ್ಬರೂ ಪೈಲಟ್‌ಗಳಾದ ಕ್ಯಾ. ಪಂಡಾ ಮತ್ತು ಕ್ಯಾ. ಶ್ರೀವಾಸ್ತವ ಮೃತಪಟ್ಟಿದ್ದಾರೆ. ಅವರ ಕುಟುಂಬದ ಸದಸ್ಯರಿಗೆ ದೇವರು ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಮತ್ತು ಈ ನೋವಿನ ಸನ್ನಿವೇಶದಲ್ಲಿ ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ" ಎಂದ ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ