ಆ್ಯಪ್ನಗರ

ವ್ಯಾಪಂ ತನಿಖೆ: ಒಂದೇ ದಿನ 20 ಸಿಬಿಐ ಅಧಿಕಾರಿಗಳ ವರ್ಗಾವಣೆ

ಇನ್ನೂ 50ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿದಿರುವ ಹೊರತಾಗಿಯೂ ಭೋಪಾಲ್‌ನ 'ವ್ಯಾಪಂ ಹಗರಣದ ವಿಶೇಷ ತನಿಖಾ ತಂಡ'ದಿಂದ ಒಂದೇ ದಿನ 20 ಸಿಬಿಐ ಅಧಿಕಾರಿಗಳನ್ನು ವರ್ಗಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

INDIATIMES NEWS NETWORK 11 Mar 2018, 2:43 pm
ಭೋಪಾಲ್: ಇನ್ನೂ 50ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ ಉಳಿದಿರುವ ಹೊರತಾಗಿಯೂ ಭೋಪಾಲ್‌ನ 'ವ್ಯಾಪಂ ಹಗರಣದ ವಿಶೇಷ ತನಿಖಾ ತಂಡ'ದಿಂದ ಒಂದೇ ದಿನ 20 ಸಿಬಿಐ ಅಧಿಕಾರಿಗಳನ್ನು ವರ್ಗಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
Vijaya Karnataka Web 20 transfers in a day cbi pulls out staff from vyapam team
ವ್ಯಾಪಂ ತನಿಖೆ: ಒಂದೇ ದಿನ 20 ಸಿಬಿಐ ಅಧಿಕಾರಿಗಳ ವರ್ಗಾವಣೆ


ಈ ಅಧಿಕಾರಿಗಳನ್ನು ದಿಲ್ಲಿಯ ಭ್ರಷ್ಟಾಚಾರ ನಿಗ್ರಹ ದಳಕ್ಕೆ ವರ್ಗಾಯಿಸಲಾಗಿದೆ ಎಂದು ತಿಳಿದುಬಂದಿದೆ. 2016ರಲ್ಲಿ ಸಿಬಿಐ ವ್ಯಾಪಂ ತನಿಖಾ ತಂಡವನ್ನು ರಚಿಸಿದ್ದು, ಡಿಐಜಿ, ಎಎಸ್‌ಪಿ, ಡಿಎಸ್‌ಪಿ ಹಾಗೂ ತನಿಖಾಧಿಕಾರಿಗಳು ಸೇರಿದಂತೆ 100ಕ್ಕೂ ಹೆಚ್ಚು ಅಧಿಕಾರಿಗಳನ್ನು ಪ್ರೊಫೆಸರ್‌ ಕಾಲೋನಿಯ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಕಳೆದ 6 ತಿಂಗಳ ಅವಧಿಯಲ್ಲಿ ಸುಮಾರು 70ರಷ್ಟು ಸಿಬ್ಬಂದಿಗಳನ್ನು ವರ್ಗಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

'ವ್ಯಾಪಂ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸುವ ಮೂಲಕ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ, ಹಗರಣ ಸಂಬಂಧ ಬಹುತೇಕರಿಗೆ ಕ್ಲೀನ್ ಚಿಟ್ ನೀಡಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ವ್ಯಾಪಂ ಹಗರಣದ ವಿಶೇಷ ತಂಡವನ್ನು ಮುಚ್ಚುವುದೇ ಲೇಸು' ಎಂದು ಕಾಂಗ್ರೆಸ್ ವಕ್ತಾರ ಕೆ.ಕೆ.ಮಿಶ್ರಾ ಅಬಿಪ್ರಾಯಪಟ್ಟಿದ್ದಾರೆ.

ಬಾಕಿ ಇರುವ 50 ಪ್ರಕರಣಗಳ ಪೈಕಿ 40 ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ. 100ಕ್ಕೂ ಹೆಚ್ಚಿನ ಪ್ರಕರಣಗಳ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ವಾಡಿಕೆಯಂತೆ ಕೆಲವು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದು ಸೆಂಟ್ರಲ್ ಏಜೆನ್ಸಿ ಅಧಿಕಾರಿಗಳು ಹೇಳುತ್ತಾರೆ.

ಮಧ್ಯ ಪ್ರದೇಶದ ವ್ಯಾಪಂ ಹಗರಣದ ತನಿಖೆಗಾಗಿ ಜುಲೈ 13, 2015ರಂದು ಸಿಬಿಐ ಅಧಿಕಾರಿಗಳು ಸ್ಪೆಷಲ್ ಟಾಸ್ಕ್ ಫೋರ್ಸ್ (ಎಸ್‌ಟಿಎಫ್) ರಚಿಸಿದ್ದರು. ಈ ಸಂದರ್ಭದಲ್ಲಿ ವಿರೋಧ ಪಕ್ಷಗಳು ತ್ವರಿತ ಕಾರ್ಯಾಚರಣೆಯನ್ನು ನಿರೀಕ್ಷಿಸಿದ್ದವು.

ಸ್ವಾಯತ್ತ ಸಂಸ್ಥೆಯಾಗಿರುವ ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿಯು ನಡೆಸಿರುವ ಪ್ರವೇಶ ಪರೀಕ್ಷೆ ಮತ್ತು ನೇಮಕಾತಿಯು ‘ವ್ಯಾಪಂ’ (Vyapam - MP Vyavasayik Pariksha Mandal) ಹಗರಣ ಎಂದೇ ಕುಖ್ಯಾತಿ ಪಡೆದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ