ಆ್ಯಪ್ನಗರ

ಜಸ್ಟೀಸ್‌ ಗೋಧ್ರಾ: ಶಿಕ್ಷೆ ಎತ್ತಿ ಹಿಡಿದ ಹೈಕೋರ್ಟ್‌

ಗುಜರಾತಿನ ಆನಂದ್‌ ಜಿಲ್ಲೆಯಲ್ಲಿ ನಡೆದಿದ್ದ 2002ರ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ 14 ಆರೋಪಿಗಳಿಗೆ ಎಸ್‌ಐಟಿ ಕೋರ್ಟ್‌ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಗುಜರಾತ್‌ ಹೈಕೋರ್ಟ್‌ ಎತ್ತಿಹಿಡಿದಿದ್ದು, ಉಳಿದ ನಾಲ್ವರು ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.

Vijaya Karnataka 12 May 2018, 8:43 am
ಅಹಮದಾಬಾದ್‌: ಗುಜರಾತಿನ ಆನಂದ್‌ ಜಿಲ್ಲೆಯಲ್ಲಿ ನಡೆದಿದ್ದ 2002ರ ಗೋಧ್ರೋತ್ತರ ಗಲಭೆಗೆ ಸಂಬಂಧಿಸಿದಂತೆ 14 ಆರೋಪಿಗಳಿಗೆ ಎಸ್‌ಐಟಿ ಕೋರ್ಟ್‌ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಗುಜರಾತ್‌ ಹೈಕೋರ್ಟ್‌ ಎತ್ತಿಹಿಡಿದಿದ್ದು, ಉಳಿದ ನಾಲ್ವರು ಆರೋಪಿಗಳನ್ನು ದೋಷಮುಕ್ತಗೊಳಿಸಿದೆ.
Vijaya Karnataka Web Godra


2002ರ ಫೆಬ್ರವರಿ 27ರಂದು ಗೋಧ್ರಾ ರೈಲು ನಿಲ್ದಾಣದಲ್ಲಿ ಸಾಬರಮತಿ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕರ ಸೇವಕರಿದ್ದ ಎಸ್‌-6 ಬೋಗಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರಿಂದ 58 ಮಂದಿ ಸುಟ್ಟು ಕರಕಲಾಗಿದ್ದರು. ಇದಕ್ಕೆ ಪ್ರತೀಕಾರವಾಗಿ ಸಾಕಷ್ಟು ಗಲಭೆಗಳು ನಡೆದಿದ್ದವು. ಅಂತಹದ್ದರಲ್ಲಿ ಆನಂದ್‌ ಜಿಲ್ಲೆಯಲ್ಲಿ ನಡೆದ 23 ಮುಸ್ಲಿಮರ ಹತ್ಯೆ ಪ್ರಕರಣವೂ ಒಂದು. ಈ ಪ್ರಕರಣದಲ್ಲಿ 23 ಜನರು ಆರೋಪಿಗಳೆಂದು ಘೋಘಿಸಿದ ಎಸ್‌ಐಟಿ ಕೋರ್ಟ್‌ 2012ರಲ್ಲಿ 18 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿ, ಉಳಿದ ಐವರಿಗೆ ಏಳು ವರ್ಷಗಳ ಸೆರೆವಾಸದ ತೀರ್ಪು ಪ್ರಕಟಿಸಿತ್ತು. ಜೀವಾವಧಿ ಶಿಕ್ಷೆಗೊಳಗಾದವರು ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ