ಆ್ಯಪ್ನಗರ

ಪಂಜಾಬ್‌ನಲ್ಲಿ ಕಳ್ಳಭಟ್ಟಿ ದುರಂತಕ್ಕೆ 21 ಬಲಿ, ಮ್ಯಾಜಿಸ್ಟೀರಿಯಲ್ ತನಿಖೆಗೆ ಸಿಎಂ ಆದೇಶ

ಘಟನೆ ಬೆನ್ನಿಗೆ ಪಂಜಾಬ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ರಮ ಮದ್ಯ ಉತ್ಪಾದನಾ ಘಟಕಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

Vijaya Karnataka 31 Jul 2020, 7:43 pm
ಚಂಡೀಗಢ: ವಿಷಕಾರಿ ಕಳ್ಳಭಟ್ಟಿ ಸೇವಿಸಿ ಕನಿಷ್ಠ 21 ಜನರು ಅಸುನೀಗಿರುವ ಘಟನೆ ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ನಡೆದಿದೆ. ಈ ಸಂಬಂಧ ವಿಸ್ತೃತ ತನಿಖೆಗೆ ಮುಖ್ಯಮಂತ್ರಿ ಕ್ಯಾ, ಅಮರಿಂದರ್‌ ಸಿಂಗ್‌ ಆದೇಶಿಸಿದ್ದಾರೆ.
Vijaya Karnataka Web Amarinder


ಅಮೃತಸರ, ಗುರುದಾಸ್‌ಪುರ ಮತ್ತು ತಾರ್ನ್ ತರಣ್‌ನಲ್ಲಿ ಕಳ್ಳಭಟ್ಟಿ ಸೇವಿಸಿ ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶ ನೀಡಿದ್ದೇನೆ. ಜಲಂಧರ್ ವಿಭಾಗದ ಆಯುಕ್ತರು ತನಿಖೆ ನಡೆಸಿ ಎಸ್‌ಎಸ್‌ಪಿ ಮತ್ತು ಇತರ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲಿದ್ದಾರೆ. ತಪ್ಪಿತಸ್ಥರೆಂದು ಕಂಡುಬಂದ ಯಾರನ್ನೂ ಬಿಡುವುದಿಲ್ಲ ಎಂದು ಅಮರಿಂದರ್‌ ಸಿಂಗ್‌ ಟ್ಟೀಟ್‌ ಮಾಡಿದ್ದಾರೆ.

ಪಂಜಾಬ್‌ನ ಅಮೃತಸರ, ಬಟಾಲಾ ಮತ್ತು ತಾರ್ನ್ ತರಣ್ ಜಿಲ್ಲೆಗಳಲ್ಲಿ ಬುಧವಾರ ಸಾವುಗಳು ಸಂಭವಿಸಿವೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಮೊದಲ ಐದು ಸಾವುಗಳು ಅಮೃತಸರದ ಮುಚ್ಚಲ್‌ ಮತ್ತು ತಂಗ್ರಾ ಜಿಲ್ಲೆಗಳಲ್ಲಿ ಜುಲೈ 29ರಂದು ನಡೆದಿತ್ತು. ಶುಕ್ರವಾರ ಬಾಟಾಲದಲ್ಲಿ ಮತ್ತೆ ಐದು ಜನರು ಸಾವನ್ನಪ್ಪಿದ್ದಾರೆ. ತಾರ್ನ್‌ ತರರಣ್‌ ಜಿಲ್ಲೆಯಲ್ಲಿ ನಾಲ್ಕು ಜನರು ಅಸುನೀಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮುಚಾಲ್ ಗ್ರಾಮದ ನಿವಾಸಿ ಬಲ್ವಿಂದರ್ ಕೌರ್ ಎಂಬಾತನನ್ನು ಬಂಧಿಸಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಆತನಿಂದ ಹೇಳಿಕೆ ಪಡೆದುಕೊಳ್ಳುತ್ತಿದ್ದಾರೆ. ಪಂಜಾಬ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಕ್ರಮ ಮದ್ಯ ಉತ್ಪಾದನಾ ಘಟಕಗಳನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸರಿಗೆ ಸಿಎಂ ನಿರ್ದೇಶನ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ