ಆ್ಯಪ್ನಗರ

ಮುಂಬಯಿ ಉಗ್ರ ದಾಳಿಗೆ 12 ವರ್ಷ

​​ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಸೇರಿ ಹಲವು ಗಣ್ಯರಿಂದ ಗೌರವ ಸಮರ್ಪಣೆ ಕಾರ್ಯವು ನಡೆಯಲಿದೆ.

Vijaya Karnataka Web 26 Nov 2020, 12:08 am
ಮುಂಬಯಿ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ 2008ರ ನವೆಂಬರ್‌ 26ರ ಮುಂಬಯಿ ಉಗ್ರ ದಾಳಿಗೆ ಗುರುವಾರ 12 ವರ್ಷವಾಗಲಿದ್ದು, ಅಸುನೀಗಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ‍್ಯಕ್ರಮವನ್ನು ಪೊಲೀಸ್‌ ಇಲಾಖೆ ಆಯೋಜಿಸಿದೆ.
Vijaya Karnataka Web ಮುಂಬಯಿ ದಾಳಿ
ಮುಂಬಯಿ ದಾಳಿ


ಪಾಕ್‌ ಮೂಲದ ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಮುಂಬಯಿನ ಹಲವು ಕಡೆ ಸರಣಿ ದಾಳಿ ನಡೆಸಿ 166 ಜನರ ಮಾರಣಹೋಮ ನಡೆಸಿದ್ದರು. ದಕ್ಷಿಣ ಮುಂಬಯಿಯಲ್ಲಿನಿರ್ಮಿಸಲಾಗಿರುವ ಪೊಲೀಸ್‌ ಇಲಾಖೆಯ ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಶ್ರದ್ಧಾಂಜಲಿ ಕಾರ‍್ಯಕ್ರಮದಲ್ಲಿ ಹುತಾತ್ಮ ಪೊಲೀಸರು ಹಾಗೂ ಯೋಧರ ಕುಟುಂಬ ಸದಸ್ಯರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ಹೇಳಿವೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ, ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಸೇರಿ ಹಲವು ಗಣ್ಯರಿಂದ ಗೌರವ ಸಮರ್ಪಣೆ ಕಾರ್ಯವು ನಡೆಯಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ