ಆ್ಯಪ್ನಗರ

ಮಕ್ಕಳ ಕಳ್ಳರೆಂದು ಸಾಧುಗಳನ್ನು ಹೊಡೆದು ಕೊಂದ ದುರುಳರು: ಭೀಕರ ಘಟನೆಗೆ ಭುಗಿಲೆದ್ದ ಆಕ್ರೋಶ!

ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಇಬ್ಬರು ಸಾಧುಗಳು ಹಾಗೂ ಓರ್ವ ಕಾರು ಚಾಲಕನನ್ನು ಗ್ರಾಮಸ್ಥರು ಹೊಡೆದು ಕೊಂದ ಅಮಾನವೀಯ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ. ನಿರಪರಾಧಿ ಸಾಧುಗಳನ್ನು ಹೊಡೆದು ಕೊಂದ ಘಟನೆಗೆ ದೇಶಾದ್ಯಂತ ಆಕ್ರೋಶ ವ್ತಕ್ತವಾಗಿದೆ.

Vijaya Karnataka Web 19 Apr 2020, 6:16 pm
ಪಾಲ್ಗರ್: ಮಕ್ಕಳನ್ನು ಅಪಹರಿಸಿ ಅಂಗಾಂಗಳನ್ನು ಕಿತ್ತು ಮಾರಾಟ ಮಾಡುತ್ತಾರೆ ಎಂಬ ಸುಳ್ಳು ಆರೋಪದ ಮೇಲೆ ಗುಂಪೊಂದು ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದು, ರಕ್ಷಣೆಗೆ ಧಾವಿಸಿದ ಪೊಲೀಸರ ಮೇಲೂ ಗ್ರಾಮಸ್ಥರು ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ.
Vijaya Karnataka Web Palghar Attack
ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಸಾಧುಗಳ ಮೇಲೆ ಹಲ್ಲೆ ನಡೆಸಿ ಕೊಂದು ಹಾಕಿದ ಘಟನೆ ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯಲ್ಲಿ ನಡೆದಿದೆ.


ಇಲ್ಲಿನ ಗಡ್ಚಿಂಚಲೆ ಗ್ರಾಮದಲ್ಲಿ ಕಳೆದ ರಾತ್ರಿ ಇಬ್ಬರು ಸಾಧುಗಳು ಹಾಗೂ ಓರ್ವ ಚಾಲಕನ ಮೇಲೆ ನೂರಾರು ಜನರ ಗುಂಪು ಹಲ್ಲೆ ಮಾಡಿದ್ದು, ಈ ವೇಳೆ ರಕ್ಷಣೆಗೆ ಧಾವಿಸಿದ ಪೊಲೀಸ್ ತಂಡದ ಮೇಲೂ ಹಲ್ಲೆ ಮಾಡಿದೆ.

ಮೂಲಗಳ ಪ್ರಕಾರ ಪರಿಚಯಸ್ಥರ ಅಂತ್ಯಸಂಸ್ಕಾರಕ್ಕೆಂದು ಮುಂಬೈಗೆ ತೆರಳುತ್ತಿದ್ದ ಇಬ್ಬುರ ಸಾಧುಗಳು ಓರ್ವ ಚಾಲಕನನ್ನು ಮಕ್ಕಳ ಕಳ್ಳರೆಂದು ಗ್ರಾಮಸ್ಥರು ಭಾವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರನ್ನು ಕಾರಿನಿಂದ ಹೊರಗೆಳೆದ ಗ್ರಾಮಸ್ಥರು ಬಡಿಗೆಗಳಿಂದ ಅವರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿ ಕೊಂದು ಹಾಕಿದ್ದಾರೆ.

ಇನ್ನು ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸ್ ವಾಹನದ ಮೇಲೂ ಗ್ರಾಮಸ್ಥರು ಹಲ್ಲೆ ಮಾಡಿದ್ದು, ಪೊಲೀಸರೂ ಕೂಡ ಹಲ್ಲೆಗೆ ಪ್ರಚೋದನೆ ನೀಡಿದ ಆರೋಪವೂ ಕೇಳಿ ಬಂದಿದೆ. ಮೃತರರನ್ನು ಇಬ್ಬರು ವೃದ್ಧ ಸಾಧುಗಳು ಹಾಗೂ ಕಾರಿನ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ.

ಪಾಸ್ ತೋರಿಸಿ ಎಂದ ಪೊಲೀಸ್ ಅಧಿಕಾರಿ: ಕೈ ಕತ್ತರಿಸಿ ಓಡಿ ಹೋದ ದುರುಳರು!


ಈ ಕುರಿತು ಮಾಹಿತಿ ನೀಡಿರುವ ಪಾಲ್ಗರ್ ಜಿಲ್ಲಾಧಿಕಾರಿ ಕೈಲಾಶ್ ಶಿಂಧೆ, ಮಕ್ಕಳ ಕಳ್ಳರೆಂದು ತಪ್ಪಾಗಿ ಭಾವಿಸಿ ಸಾಧುಗಳನ್ನು ಹೊಡೆದು ಕೊಲ್ಲಲಾಗಿದ್ದು, ಈ ಕುರಿತು ತನಿಖೆ ಮುಂದುವರೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಪಾಲ್ಗರ್ ಘಟನೆಗೆ ಇಡೀ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು,ವಿಡಿಯೋದಲ್ಲಿ ಕೆಲವು ಪೊಲೀಸರು ಉದ್ದೇಶಪೂರ್ವಕವಾಗಿ ಸಾಧುಗಳನ್ನು ಉದ್ರಿಕ್ತ ಗುಂಪಿನೆಡೆಗೆ ನೂಕಿದ ದೃಶ್ಯ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ವೃದ್ಧ ಸಾಧುಗಳನ್ನು ಹೊಡೆದು ಕೊಂದ ಗ್ರಾಮಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿರುವ ನೆಟ್ಟಿಗರು, ಕರ್ತವ್ಯ ಮರೆತ ಪೊಲೀಸರ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ