ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸರಕಾರ ಮತ್ತು ಅಧಿಕಾರಶಾಹಿ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ರಾಜನಾಥ್ಸಿಂಗ್ ಅವರನ್ನು ಕರ್ನಾಟಕ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ಕೇರಳದ ಮುಖ್ಯಮಂತ್ರಿಗಳು ಒತ್ತಾಯಿಸಿದ್ದಾರೆ.
ನೀತಿ ಆಯೋಗದ ಸಭೆಗಿಂತ ಮೊದಲು ಈ ಇಬ್ಬರೂ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು ಮತ್ತು ಪಿಣರಾಯಿ ವಿಜಯನ್ ಅವರು, ನಾಲ್ಕು ತಿಂಗಳುಗಳಿಂದ ಐಎಎಸ್ ಅಧಿಕಾರಿಗಳು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಸರಕಾರ ಕೆಲಸ ಮಾಡುವುದಾದರೂ ಹೇಗೆ?. ಇಂಥ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಈ ಬಿಕ್ಕಟ್ಟಿಗೆ ಪರಿಹಾರ ಹುಡುಕಬೇಕು ಎಂದು ಮನವಿ ಮಾಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಮಮತಾ ಬ್ಯಾನರ್ಜಿ, ''ದಿಲ್ಲಿ ರಾಷ್ಟ್ರ ರಾಜಧಾನಿ ಆಗಿರುವುದರಿಂದ ದೇಶದ ಎಲ್ಲೆಡೆಯಿಂದ ಜನ ಇಲ್ಲಿಗೆ ಬರುತ್ತಾರೆ. ನಾಲ್ಕು ತಿಂಗಳುಗಳಿಂದ ಸರಕಾರ ಸ್ತಭ್ಧವಾದರೆ ಯಾವ ಕೆಲಸಗಳೂ ಆಗುವುದಿಲ್ಲ. ಇದರಿಂದ ಎಲ್ಲರಿಗೂ ತೊಂದರೆಯಾಗುತ್ತದೆ ಎಂಬುದನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ನಮ್ಮ ಮನವಿಗೆ ಪ್ರಧಾನಿ ಮೌನವಾಗಿದ್ದರಾದರೂ ಗೃಹ ಸಚಿವ ರಾಜನಾಥ್ಸಿಂಗ್ ಅವರು ಈ ಕುರಿತು ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ,'' ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.
ಈ ಕುರಿತು ವಿಜಯ ಕರ್ನಾಟಕ ಜತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ''ನಾವು ಪ್ರಧಾನಿಗೆ ಮನವಿ ಮಾಡಿದ್ದೇವೆ, ಅವರು ಏನು ಮಾಡುತ್ತಾರೋ ನೋಡೋಣ,'' ಎಂದರು.
ಕೇಜ್ರಿವಾಲ್ ನಕ್ಸಲೈಟ್ ಇದ್ದಂತೆ: ಸ್ವಾಮಿ
''ಅರವಿಂದ ಕೇಜ್ರಿವಾಲ್ ಒಬ್ಬ ನಕ್ಸಲೈಟ್. ಅವರಿಗೆ ಕರ್ನಾಟಕ ಸಿಎಂ ಕುಮಾರಸ್ವಾಮಿ, ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ನಾನಾ ರಾಜ್ಯಗಳ ಮುಖ್ಯಂತ್ರಿಗಳು ಬೆಂಬಲ ನೀಡಿದ್ದೇಕೆ?'' ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನಿಸಿದ್ದಾರೆ.
ನೀತಿ ಆಯೋಗದ ಸಭೆಗಿಂತ ಮೊದಲು ಈ ಇಬ್ಬರೂ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ, ಚಂದ್ರಬಾಬು ನಾಯ್ಡು ಮತ್ತು ಪಿಣರಾಯಿ ವಿಜಯನ್ ಅವರು, ನಾಲ್ಕು ತಿಂಗಳುಗಳಿಂದ ಐಎಎಸ್ ಅಧಿಕಾರಿಗಳು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರೆ ಸರಕಾರ ಕೆಲಸ ಮಾಡುವುದಾದರೂ ಹೇಗೆ?. ಇಂಥ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಈ ಬಿಕ್ಕಟ್ಟಿಗೆ ಪರಿಹಾರ ಹುಡುಕಬೇಕು ಎಂದು ಮನವಿ ಮಾಡಿದ್ದಾರೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಅನೌಪಚಾರಿಕವಾಗಿ ಮಾತನಾಡಿದ ಮಮತಾ ಬ್ಯಾನರ್ಜಿ, ''ದಿಲ್ಲಿ ರಾಷ್ಟ್ರ ರಾಜಧಾನಿ ಆಗಿರುವುದರಿಂದ ದೇಶದ ಎಲ್ಲೆಡೆಯಿಂದ ಜನ ಇಲ್ಲಿಗೆ ಬರುತ್ತಾರೆ. ನಾಲ್ಕು ತಿಂಗಳುಗಳಿಂದ ಸರಕಾರ ಸ್ತಭ್ಧವಾದರೆ ಯಾವ ಕೆಲಸಗಳೂ ಆಗುವುದಿಲ್ಲ. ಇದರಿಂದ ಎಲ್ಲರಿಗೂ ತೊಂದರೆಯಾಗುತ್ತದೆ ಎಂಬುದನ್ನು ಮನವರಿಕೆ ಮಾಡುವ ಪ್ರಯತ್ನ ಮಾಡಿದ್ದೇವೆ. ನಮ್ಮ ಮನವಿಗೆ ಪ್ರಧಾನಿ ಮೌನವಾಗಿದ್ದರಾದರೂ ಗೃಹ ಸಚಿವ ರಾಜನಾಥ್ಸಿಂಗ್ ಅವರು ಈ ಕುರಿತು ಪ್ರಯತ್ನ ಮಾಡುವ ಭರವಸೆ ನೀಡಿದ್ದಾರೆ,'' ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.
ಈ ಕುರಿತು ವಿಜಯ ಕರ್ನಾಟಕ ಜತೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ''ನಾವು ಪ್ರಧಾನಿಗೆ ಮನವಿ ಮಾಡಿದ್ದೇವೆ, ಅವರು ಏನು ಮಾಡುತ್ತಾರೋ ನೋಡೋಣ,'' ಎಂದರು.
ಕೇಜ್ರಿವಾಲ್ ನಕ್ಸಲೈಟ್ ಇದ್ದಂತೆ: ಸ್ವಾಮಿ
''ಅರವಿಂದ ಕೇಜ್ರಿವಾಲ್ ಒಬ್ಬ ನಕ್ಸಲೈಟ್. ಅವರಿಗೆ ಕರ್ನಾಟಕ ಸಿಎಂ ಕುಮಾರಸ್ವಾಮಿ, ಪ.ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿದಂತೆ ನಾನಾ ರಾಜ್ಯಗಳ ಮುಖ್ಯಂತ್ರಿಗಳು ಬೆಂಬಲ ನೀಡಿದ್ದೇಕೆ?'' ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಪ್ರಶ್ನಿಸಿದ್ದಾರೆ.