ರಾಯ್ಪುರ: ಛತ್ತೀಸ್ಗಢದ ಬಿಜಾಪುರ್ನಲ್ಲಿ ನಡೆದ ನಕ್ಸಲರ ಜತೆಗಿನ ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮಾವೋವಾದಿಗಳೂ ಸಾವನ್ನಪ್ಪಿದ್ದು ಅವರಿಗೂ ಭಾರಿ ಹಾನಿಯಾಗಿದೆ ಎಂದು ಹಿರಿಯ ಅಧಿಕಾರಿ ಅಶೋಕ್ ಜುನೇಜಾ ಹೇಳೀದ್ದಾರೆ.
ಸಿಆರ್ಪಿಎಫ್ನ ಕೋಬ್ರಾ ಘಟಕದ ಸೈನಿಕರು, ಜಿಲ್ಲಾ ಮೀಸಲು ಪಡೆ, ವಿಶೇಷ ಟಾಸ್ಕ್ ಫೋರ್ಸ್ನ ಸಿಬ್ಬಂದಿಗಳು ಶನಿವಾರ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಇಳಿದಿದ್ದರು. ಈ ವೇಳೆ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿನ ಬೆಟ್ಟ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಯಿತು ಎಂದು ರಾಜ್ಯ ಡಿಜಿಪಿ ಡಿಎಂ ಅವಸ್ಥಿ ವಿವರ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಐವರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇನ್ನೂ ಎನ್ಕೌಂಟರ್ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. .
ಕೆಲ ದಿನದ ಹಿಂದೆ ಛತ್ತೀಸ್ಗಢದ ನಾರಾಯಣ್ಪುರ್ ಜಿಲ್ಲೆಯಲ್ಲಿ 27 ಜಿಲ್ಲಾ ಮೀಸಲು ಪಡೆ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಇದರಲ್ಲಿ ಐವರು ಪಪೊಲೀಸರು ಸಾವನ್ನಪ್ಪಿ 14 ಜನರು ಗಾಯಗೊಂಡಿದ್ದರು. ಇದೀಗ ಮತ್ತೊಂದು ಎನ್ಕೌಂಟರ್ನಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಸಿಆರ್ಪಿಎಫ್ನ ಕೋಬ್ರಾ ಘಟಕದ ಸೈನಿಕರು, ಜಿಲ್ಲಾ ಮೀಸಲು ಪಡೆ, ವಿಶೇಷ ಟಾಸ್ಕ್ ಫೋರ್ಸ್ನ ಸಿಬ್ಬಂದಿಗಳು ಶನಿವಾರ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಇಳಿದಿದ್ದರು. ಈ ವೇಳೆ ಸುಕ್ಮಾ ಮತ್ತು ಬಿಜಾಪುರ್ ಗಡಿಯಲ್ಲಿನ ಬೆಟ್ಟ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಯಿತು ಎಂದು ರಾಜ್ಯ ಡಿಜಿಪಿ ಡಿಎಂ ಅವಸ್ಥಿ ವಿವರ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಗಳ ಪ್ರಕಾರ ಐವರು ಸೈನಿಕರು ಸಾವನ್ನಪ್ಪಿದ್ದಾರೆ. ಹಲವರು ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ಇನ್ನೂ ಎನ್ಕೌಂಟರ್ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. .
ಕೆಲ ದಿನದ ಹಿಂದೆ ಛತ್ತೀಸ್ಗಢದ ನಾರಾಯಣ್ಪುರ್ ಜಿಲ್ಲೆಯಲ್ಲಿ 27 ಜಿಲ್ಲಾ ಮೀಸಲು ಪಡೆ ಪೊಲೀಸರನ್ನು ಹೊತ್ತೊಯ್ಯುತ್ತಿದ್ದ ವಾಹನದ ಮೇಲೆ ನಕ್ಸಲರು ದಾಳಿ ನಡೆಸಿದ್ದರು. ಇದರಲ್ಲಿ ಐವರು ಪಪೊಲೀಸರು ಸಾವನ್ನಪ್ಪಿ 14 ಜನರು ಗಾಯಗೊಂಡಿದ್ದರು. ಇದೀಗ ಮತ್ತೊಂದು ಎನ್ಕೌಂಟರ್ನಲ್ಲಿ ಐವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.