ಆ್ಯಪ್ನಗರ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಆರು ಕಾರ್ಮಿಕರ ದುರ್ಮರಣ

ಒಣಗಲು ಇಟ್ಟಿದ್ದ ಪಟಾಕಿ ಬಂಡಲ್‌ಗಳು ಸಿಡಿದು ವರನೂರ್‌ನಲ್ಲಿರುವ ಪಟಾಕಿ ಕಾರ್ಖಾನೆಯ ಎಂಟು ಶಡ್‌ಗಳು ಸುಟ್ಟು ಭಸ್ಮವಾಗಿದೆ.

Vijaya Karnataka 23 Feb 2019, 8:06 am
ತಿರುನಲ್ವೇಲಿ: ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶುಕ್ರವಾರ ಉಂಟಾದ ಸ್ಫೋಟದಲ್ಲಿ ಆರು ಕಾರ್ಮಿಕರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಒಣಗಲು ಇಟ್ಟಿದ್ದ ಪಟಾಕಿ ಬಂಡಲ್‌ಗಳು ಸಿಡಿದು ವರನೂರ್‌ನಲ್ಲಿರುವ ಪಟಾಕಿ ಕಾರ್ಖಾನೆಯ ಎಂಟು ಶಡ್‌ಗಳು ಸುಟ್ಟು ಭಸ್ಮವಾಗಿದೆ.
Vijaya Karnataka Web Cracker


ಇದರಿಂದ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರನ್ನು ಕೋವಿಲ್‌ಪಟ್ಟಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಕಾರ್ಖಾನೆ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ